ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಾತಿಗಣತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಮನೂರು ಶಿವಶಂಕರಪ್ಪ: 2 ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ, ಖಾಸಗಿ ಸರ್ವೆ ನಡೆಸೋ ಆಲೋಚನೆ ಇದೆ ಎಂದ ರಾಷ್ಟ್ರಾಧ್ಯಕ್ಷರು

On: March 1, 2024 2:07 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-03-2024

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಲ್ಲಿಸಿದ ವರದಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಕೇವಲ 65 ಲಕ್ಷ ಜನಸಂಖ್ಯೆ ತೋರಿಸಲಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಉಪಪಂಗಡಗಳೆಲ್ಲವೂ ಸೇರಿದರೆ 2 ಕೋಟಿಗೂ ಹೆಚ್ಚು ಜನಸಂಖ್ಯೆ ಆಗಲಿದೆ. ಉದ್ದೇಶಪೂರ್ವಕವಾಗಿ ಕಡಿಮೆ ಜನಸಂಖ್ಯೆ ತೋರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊದಲಿನಿಂದಲೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವು ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ದಾವಣಗೆರೆಯಲ್ಲಿ ನಡೆದ ಅಧಿವೇಶನದಲ್ಲಿಯೂ ವಿರೋಧಿಸಿ ನಿರ್ಣಯ ಮಂಡಿಸಿದ್ದೇವೆ. ಸಿಎಂ ಸಿದ್ದರಾಮಯ್ಯರ ಗಮನಕ್ಕೂ ತಂದಿದ್ದವೆ. ಆದ್ರೆ, ವರದಿ ಸ್ವೀಕಾರ ಮಾಡಲಾಗಿದೆ. ಸಚಿವ ಸಂಪುಟ, ಸದನಕ್ಕೆ ಬರಲಿ. ಆಮೇಲೆ ಏನಾಗುತ್ತೆ ಎಂಬುದನ್ನು ನೋಡೋಣ ಎಂದು ಹೇಳಿದರು.

ಕಾಂತರಾಜ್ ವರದಿಯನ್ನು ತಂದುಕೊಡುವವರು ಜಯಪ್ರಕಾಶ್ ಹೆಗ್ಡೆ ಅವರು. ಕಳೆದ 9 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ಅವೈಜ್ಞಾನಿಕವಾಗಿದೆ. ನಾವು ಯಾವ ಸಮುದಾಯದ ವಿರೋಧಿಗಳಲ್ಲ. ವೈಜ್ಞಾನಿಕ, ಸಮರ್ಪಕ ಸರ್ವೆ ಆಗಬೇಕೆಂಬ ಬಸವರಾಜ್ ಬೊಮ್ಮಾಯಿ ಅವರ ಒತ್ತಾಯ ಸರಿಯಾಗಿಯೇ ಇದೆ ಎಂದು ಸಮರ್ಥಿಸಿಕೊಂಡರು.

ಜನಸಂಖ್ಯೆ ಆಧಾರದ ಮೇಲೆ ನಾವು ಹೇಳ್ತೀವಿ. ವೀರಶೈವ ಲಿಂಗಾಯತ ಸಮುದಾಯದ ಉಪಪಂಗಡಗಳೆಲ್ಲವೂ ಸೇರಿದರೆ 2 ಕೋಟಿ ಜನಸಂಖ್ಯೆ ಇದೆ. ವರದಿ ಸ್ವೀಕಾರ ಮಾಡಲಾಗಿದೆ. ಮುಂದೇನು ಮಾಡ್ತಾರೆ ನೋಡೋಣ. ಆಮೇಲೆ ವಿಚಾರ ಮಾಡ್ತೀವಿ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

ಉದ್ದೇಶಪೂರ್ವಕವಾಗಿಯೇ ಜನಸಂಖ್ಯೆ ಕಡಿಮೆ ತೋರಿಸಲಾಗಿದೆ ಎಂಬುದು ವರದಿಯಿಂದ ಗೊತ್ತಾಗುತ್ತದೆ. 9 ವರ್ಷದ ಕೆಳಗೆ ಮಾಡಿದ ಸರ್ವೇ. ಈಗ ಸ್ವೀಕಾರ ಮಾಡಲಾಗಿದೆ. ನಾವು ಖಾಸಗಿಯಾಗಿ ಸರ್ವೇ ನಡೆಸಿಲ್ಲ. ಖಾಸಗಿಯಾಗಿ ನಾವೇ ಸರ್ವೆ ನಡೆಸುವ ಆಲೋಚನೆ ಇದೆ. ಮಾರ್ಚ್ ತಿಂಗಳ ಬಳಿಕ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಪರಿಶಿಷ್ಟರು 1.8 ಕೋಟಿ ಜನಸಂಖ್ಯೆಯಿರುವುದಕ್ಕೆ ನಮ್ಮ ಅಭ್ಯಂತರ, ವಿರೋಧ ಇಲ್ಲ. ವೀರಶೈವ ಲಿಂಗಾಯತ ಸಮುದಾಯದ ಜನಸಂಖ್ಯೆ ಕಡಿಮೆ ತೋರಿಸಲಾಗಿರುವುದಕ್ಕೆ ನಮ್ಮ ಆಕ್ಷೇಪ ಇದೆ. 65 ಲಕ್ಷ ಜನಸಂಖ್ಯೆ ಇದ್ದಾರೆಂದು ತೋರಿಸಿದ್ದಾರೆ. ಡಬಲ್ ಇದೆ. 2 ಕೋಟಿ ಜನಸಂಖ್ಯೆ ಇದೆ. ಜಾತಿ ಗಣತಿ ಬಹಿರಂಗದ ಬಳಿಕ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ. ಕೆಲವರು ಛೂ ಬಿಡ್ತಾರೆ. ಹೊರ ಬಂದಾಗ ಹಾಗೆ ಆಗುತ್ತದೆ ಎಂದು ವಿಶ್ಲೇಷಿಸಿದರು.

ಜಾತಿ ಗಣತಿ ವರದಿಯಲ್ಲಿನ ಬಹುತೇಕ ಅಂಶಗಳನ್ನು ಎಲ್ಲರೂ ನೋಡಿದ್ದಾರೆ. ಹೆಗ್ಡೆಯವರ ಬಳಿ ಮಾಹಿತಿ ಪಡೆದಿದ್ದಾರೆ. ಹೆಚ್ಚು ಕಡಿಮೆ ಹೇಳುತ್ತಿದ್ದಾರೆ. ಸಚಿವ ಸಂಪುಟ, ವಿಧಾನಸಭೆ, ವಿಧಾನಪರಿಷತ್ ವರದಿ ಮಂಡನೆ ಬರಬೇಕಲ್ವಾ. ಆಗ ನೋಡೋಣ. ಪುನರ್ ಪರಿಶೀಲನೆ ನಡೆಸುವಂತೆ ಒತ್ತಾಯಿಸಲಾಗುವುದು ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment