Home ದಾವಣಗೆರೆ ಸಿರಿಗೆರೆಯಲ್ಲಿ 6 ಕೋಟಿ ರೂ. ವೆಚ್ಚದ ಶಿವನಾರದ ಮುನಿ ದೇವಾಲಯ..! ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಅಮೃತಹಸ್ತದಿಂದ ಭೂಮಿ ಪೂಜೆ!
ದಾವಣಗೆರೆನವದೆಹಲಿಬೆಂಗಳೂರು

ಸಿರಿಗೆರೆಯಲ್ಲಿ 6 ಕೋಟಿ ರೂ. ವೆಚ್ಚದ ಶಿವನಾರದ ಮುನಿ ದೇವಾಲಯ..! ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಅಮೃತಹಸ್ತದಿಂದ ಭೂಮಿ ಪೂಜೆ!

Share
ಶಿವಮೂರ್ತಿ ಶಿವಾಚಾರ್ಯ ಶ್ರೀ
Share

ದಾವಣಗೆರೆ: ‘ಚಿಗಟೇರಿ ಎಂಬ ಊರಿಲ್ಲ, ನಾರಪ್ಪನೆಂಬ ದೇವರಿಲ್ಲ’ ಎಂಬ ಗಾದೆ ಪ್ರಚಲಿತ. ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನಲ್ಲಿರುವ ಈ ಪ್ರಸಿದ್ಧ ಚಿಗಟೇರಿ ಪುರಾಧೀಶ ಶಿವನಾರದಮುನಿಯ ನೂತನ ದೇವಾಲಯ ನಿರ್ಮಾಣ ಕಾರ್ಯದ ಭೂಮಿ ಪೂಜೆ ಕಾರ್ಯಕ್ರಮವು ಸಿರಿಗೆರೆಯಲ್ಲಿ ಜನವರಿ 19 ಸೋಮವಾರ ಬೆಳಗ್ಗೆ 10.15 ಕ್ಕೆ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಅಮೃತ ಹಸ್ತದಿಂದ ನೆರವೇರಲಿದೆ.

READ ALSO THIS STORY: BIG BREAKING: ದಾವಣಗೆರೆಯ ಆನಗೋಡು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವು: ವೀಕ್ಷಣೆ ತಾತ್ಕಾಲಿಕ ಬಂದ್!

ಮಧ್ಯ ಕರ್ನಾಟಕದಲ್ಲಿ ಅಪಾರ ಭಕ್ತರನ್ನು ಹೊಂದಿರುವ ದೈವ ಶಿವನಾರದಮುನಿ. ದೇವರಿಗೆ ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಗದಗ ಜಿಲ್ಲೆಗಳು ಸೇರಿ ಅಪಾರ ಭಕ್ತರು ನಡೆದುಕೊಳ್ಳುವರು. ನಾರಿನ ಪಾಚಿ ಎಸೆದರೆ ನಾರುಣ್ಣು ಮಾಯ’ವೆಂಬ ಪ್ರತೀತಿಯೊಂದಿಗೆ ಸ್ವಾಮಿ, ಮಹರ್ಷಿ ತಪೋನಿಧಿಗಳಿಗೆ ನೆಲೆಕೊಟ್ಟ ಸ್ಥಳ -‘ಚಿನ್ನದ ಚಿಗಟೇರಿ’. ‘ದಂಡಗಂಟೆಯ ನಾರದ’ ಎಂಬ ಖ್ಯಾತಿ ಪಡೆದ ದೈವ ಶಿವನಾರದಮುನಿ.

ಎಂಟನೇ ಶತಮಾನದಲ್ಲಿ ಉತ್ತರ ಭಾರತದಿಂದ ಬಂದು ಮಧ್ಯ ಕರ್ನಾಟಕದಲ್ಲಿ ನೆಲೆನಿಂತು, ತಪಗೈದ ‘ಭೈರೇಶ’ ತನ್ನ ತಪಶಕ್ತಿಯಿಂದ ಭಕ್ತನ ಮೈಮೇಲಿನ ‘ನಾರುಹುಣ್ಣು’(ಚರ್ಮದ ಮೇಲಿನ ಗಂಟು) ನಿವಾರಣೆ ಮಾಡಿದರು. ಭೈರೇಶರು ಶಿವನಾರದ ಮುನಿಯಾಗಿ ಚಿಗಟೇರಿ ಗ್ರಾಮದ ಕ್ಷಾಮ ನೀಗಿದ್ದರು, ಪವಾಡ ಗೈದಿದ್ದರು ಎಂಬುದು ಇತಿಹಾಸ. ಅಂದು ಕ್ಷಾಮದಿಂದ ಕಂಗಾಲಾಗಿದ್ದ ಜನರ ಬಾಳಿಗೆ ಬೆಳಕಾಗಿ ಬಂದಿದ್ದ ನಾರದ ಮುನಿಗೆ, ಇಂದು ನಾಡಿನೆಲ್ಲೆಡೆ ಲಕ್ಷಾಂತರ ಭಕ್ತರಿದ್ದಾರೆ. ಅಂದಿನಿಂದ ನಾರನ್ಮುನಿ, ಶಿವನಾರದಮುನಿ ಎಂದು ಪ್ರಚಲಿತರಾದರು. ಹುಲ್ಲೂರಿನಿಂದ ಚಿಗಟೇರಿ ಗ್ರಾಮದ ಕ್ಷಾಮ ನಿವಾರಣೆಗೆ ಬಂದು ನೆಲೆಸಿದರು. ಅಲ್ಲಿ ನಾಡಗೌಡರು ದೇವಸ್ಥಾನ ನಿರ್ಮಿಸಿದರು ಎಂಬುದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

ಭಕ್ತರ ಸಹಕಾರದಿಂದ ಅಂದಾಜು 6 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಯನ ಮನೋಹರ ಚಾಲುಕ್ಯ ಶೈಲಿಯಲ್ಲಿ ಕಲ್ಲಿನಲ್ಲಿ ದೇವಾಲಯ ನಿರ್ಮಾಣ ಕಾರ್ಯಕ್ಕೆ ಶಿವನಾರದ ಮುನಿ ದೇವಸ್ಥಾನ ಟ್ರಸ್ಟ್ ಸಂಕಲ್ಪಿಸಿ, ನೀಲನಕ್ಷೆಯೊಂದಿಗೆ ಭೂಮಿ ಪೂಜೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.