SUDDIKSHANA KANNADA NEWS/ DAVANAGERE/ DATE:21-10-2024
ದಾವಣಗೆರೆ: ಅ.22ರಂದು ಬೆಂಗಳೂರಿನಲ್ಲಿ ಜಾತಿ ಗಣತಿ ವರದಿ ಜಾರಿ ವಿರೋಧಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ನೇತೃತ್ವದಲ್ಲಿ ವೀರಶೈವ ಲಿಂಗಾಯತ ನಾಯಕರ ಸಭೆ ನಡೆಯಲಿದೆ.
ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರು ಈ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಬಿಡುಗಡೆ ಸಾಧ್ಯತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್, ಬಿಜೆಪಿ ಎಂದೇನೂ ಇಲ್ಲ. ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಮುಖಂಡರು, ಎಲ್ಲಾ ಪಕ್ಷದವರು ಭಾಗವಹಿಸುತ್ತಾರೆ. ಕ್ಯಾಬಿನೆಟ್ಗೂ ಮುನ್ನವೇ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಯಲಿದೆ. ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಮುಖಂಡರೂ ಸಭೆಯಲ್ಲಿ ಭಾಗವಹಿಸುತ್ತಾರೆ. ಸಭೆ ನಡೆದೇ ನಡೆಯುತ್ತದೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.