ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಗುಂಡಿಕ್ಕಿ ಕೊಲ್ಲಿ” ಎಂಬ ಕಾನೂನು ಜಾರಿ ವಿಚಾರ, ಕಾನೂನಿನಡಿ ಪರಿಶೀಲಿಸಿ ಕ್ರಮ: ಈಶ್ವರಪ್ಪ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ

On: February 9, 2024 2:19 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-02-2024

ಚಿತ್ರದುರ್ಗ: ದೇಶ ವಿಭಜನೆ ಬಗ್ಗೆ ಮಾತನಾಡುವ ಡಿ. ಕೆ. ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಬೇಕು ಎಂಬ ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇಂಥವರಿಂದ ಪಾಠ ಕಲಿಯುವುದು ಏನೂ ಇಲ್ಲ ಎಂದು ಛಾಡಿಸಿದರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಗುರುಪೀಠದ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳುವ ಮೊದಲು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರ್ ಎಸ್ ಎಸ್ ನಲ್ಲಿ ತರಬೇತಿ ಪಡೆದಿರುವ ಕೆ. ಎಸ್. ಈಶ್ವರಪ್ಪ ಅವರು ಹೊಡಿ, ಬಡಿ, ಕೊಲ್ಲು ಎಂದು ಹೇಳಿಕೆ ನೀಡುತ್ತಾರೆ. ಈಶ್ವರಪ್ಪರ ಹೇಳಿಕೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದೇಶ ವಿಭಜಿಸುವವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ರೂಪಿಸಬೇಕು ಎಂಬ ಕೆ. ಎಸ್. ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿದ ಅವರು, ಈಶ್ವರಪ್ಪ ಹೇಳಿಕೆ ನೋಡಿದರೆ ಆರ್ ಎಸ್ ಎಸ್ ಎಂತಹ ಪಾಠ ಕಲಿಸುತ್ತದೆ ಎಂದು ತಿಳಿಯುತ್ತಿದೆ. ಸಂಸದ
ಡಿ. ಕೆ. ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಅಂತಿದ್ದಾರೆ. ಒಂದು ರಾಜಕೀಯ ಪಕ್ಷದ ಮುಖಂಡರಾಗಿ ಈ ರೀತಿ ಹೇಳಿಕೆಗಳನ್ನು ನೀಡುತ್ತಾರೆ. ಇವರನ್ನು ರಾಜಕೀಯ ಧುರೀಣಿರು ಎಂದು ಕರೆಯಬೇಕಾ ಎಂದು ಪ್ರಶ್ನಿಸಿದರು.

ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡುವ ಬದಲು ನಾಗಮೋಹನ್ ದಾಸ್ ಸಮಿತಿಗೆ ದೂರು ನೀಡಲಿ. ಯಾವ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಸಮಿತಿಗೆ ತಿಳಿಸಲಿ
ಎಂದು ಹೇಳಿದರು.

ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಸಚಿವೆ ನಿರ್ಮಾಲ ಸಿತಾರಾಮನ್ 5300ಕೋಟೆ ಬಜೆಟ್ ನಲ್ಲಿ ಘೋಷಿಸಿದ್ದರು. ಆದರೆ ಇದೂವರೆಗೆ ಭದ್ರಾ ಯೋಜನೆಗೆ ಒಂದು ನಯಾಪೈಸೆ ಕೊಟ್ಟಿಲ್ಲ. ಯಾಕೆ ಎಂಬುದನ್ನು ರಾಜ್ಯದ ಸಂಸದರು ಕೇಳಬೇಕಲ್ಲವೇ? ಎಂದು ಪ್ರಶ್ನಿಸಿದ ಅವರು, ನಾನು ಸೇರಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ನಿರ್ಮಾಲ ಸಿತಾರಾಮನ್ ಹಾಗೂ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಕೂಡ ಹಣ ನೀಡಿಲ್ಲ ಎಂದು ದೂರಿದರು.

ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಒಂದು ವರ್ಷ ಟ್ಯಾಕ್ಸ್ ಬೇಡ ಎಂದಿದ್ದರು. ನರೇಂದ್ರ ಮೋದಿ ಆಗ ಹೇಳಿದ್ದು ದೇಶ ವಿರೋಧಿ ಹೇಳಿಕೆಯೇ ಎಂದು ಪ್ರಶ್ನಿಸಿ, ಮಿಸ್ಟರ್ ಮೋದಿ ಅವರಿಂದ ಆಗ ಒಂದು ಮಾತು, ಈಗ ಒಂದು ಮಾತು ಎಂದು ಲೇವಡಿ ಮಾಡಿದರು.

ಈ ವೇಳೆ ಸಚಿವ ಕೆ.ಹೆಚ್.ಮುನಿಯಪ್ಪ, ಡಿ.ಸುಧಾಕರ್, ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ ಸಂಸದ ಬಿ‌.ಎನ್.ಚಂದ್ರಪ್ಪ, ಹೆಚ್‌.ಆಂಜನೇಯ ಹಾಜರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment