ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Siddaramaiah Congrats: ಭಾರತೀಯರ ಕನಸು ನನಸು: ಚಂದ್ರಯಾನ 3 ಯಶಸ್ಸಿಗೆ ಇಸ್ರೋ ಅಧ್ಯಕ್ಷರಿಗೆ ಕರೆ ಮಾಡಿ ಕಂಗ್ರಾಟ್ಸ್ ಹೇಳಿದ ಸಿಎಂ ಸಿದ್ದರಾಮಯ್ಯ

On: August 23, 2023 2:44 PM
Follow Us:
Siddaramaiah Congrats
---Advertisement---

SUDDIKSHANA KANNADA NEWS/ DAVANAGERE/ DATE:23-08-2023

 

ಬೆಂಗಳೂರು: ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಭಿನಂದಿಸಿದರು.

ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ ವಿಜ್ಞಾನಕ್ಕೆ ಪ್ರಾರಂಭದ ದಿನಗಳಲ್ಲಿಯೇ ಬೆಂಬಲ ಮತ್ತು ನೆರವನ್ನು ನೀಡಿದ್ದ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸುದ್ದಿಯನ್ನೂ ಓದಿ: 

ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂಡಿಯಾ ಕಮಾಲ್: ಚಂದ್ರನ ಅಂಗಳದಲ್ಲಿ ಭಾರತ ತ್ರಿವಿಕ್ರಮ, ಸುಸೂತ್ರವಾಗಿ ಲ್ಯಾಂಡ್ ಆದ ವಿಕ್ರಮ್ ಲ್ಯಾಂಡರ್

ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಪೂರ್ವವಾದ ಸಾಧನೆ ಮಾಡಿದೆ. ಭಾರತೀಯರೆಲ್ಲರಿಗೂ ಇದು ಹೆಮ್ಮೆಯ ಕ್ಷಣ. ಈ ಅಸಾಧಾರಣ ಸಾಧನೆ ಮಾಡಿದ ಪ್ರತಿಯೊಬ್ಬ ವಿಜ್ಞಾನಿಗಳಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಜಗತ್ತಿನ ಮುಂಚೂಣಿ ದೇಶಗಳ ಸಾಲಿನಲ್ಲಿ ಮತ್ತೊಮ್ಮೆ ನಿಚ್ಚಳವಾಗಿ ಪ್ರಕಾಶಿಸಿದೆ. ಇಸ್ರೋ ಸಂಸ್ಥೆಯ ಮುಂದಿನ ದಿನಗಳ ಎಲ್ಲಾ ಪ್ರಯತ್ನಗಳಿಗೂ ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment