SUDDIKSHANA KANNADA NEWS/ DAVANAGERE/ DATE:10-02-2025
ದಾವಣಗೆರೆ: ಶ್ರೀಕ್ಷೇತ್ರ ಉಚ್ಚಂಗಿದುರ್ಗದ ಭರತ ಹುಣ್ಣಿಮೆ ಫೆ.11 ರಿಂದ 13 ರವರೆಗೆ ಜರುಗಲಿದೆ.
ಭಕ್ತಾದಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ದಾವಣಗೆರೆ ವಿಭಾಗದ ಘಟಕಗಳಿಂದ 45 ಹೆಚ್ಚುವರಿ ವಿಶೇಷ ಬಸ್ಗಳ ಸಂಚಾರ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಮೈಲಾರ ಜಾತ್ರಾ ಪ್ರಯುಕ್ತ ವಿಶೇಷ ಬಸ್ ಸೌಲಭ್ಯ:
ಫೆಬ್ರವರಿ 14 ರಂದು ನಡೆಯುವ ಮೈಲಾರ ಕಾರ್ಣಿಕೋತ್ಸವ ಪ್ರಯುಕ್ತ ಫೆ.13 ರಿಂದ 15 ರವರೆಗೆ ಭಕ್ತಾದಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ದಾವಣಗೆರೆ ವಿಭಾಗದಿಂದ 75 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.