ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

EXCLUSIVE: ರಾಜ್ಯಮಟ್ಟದ ಯುವಜನೋತ್ಸವದ “ಅವನೀತರು” ನಾಮಫಲಕ! ಯಡವಟ್ಟಿಗೆ ವಿಶೇಷ ಆಹ್ವಾನಿತರೇ ಗಾಬರಿ!

On: January 5, 2025 6:38 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-01-2025

ದಾವಣಗೆರೆ: ದಾವಣಗೆರೆಯಲ್ಲಿ ಎರಡು ದಿನಗಳ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಭಾರೀ ಸ್ಪಂದನೆ ಸಿಕ್ಕಿದೆ. ನಾಡಿನ ದೊರೆ ಸಿಎಂ ಸಿದ್ದರಾಮಯ್ಯರೇ ಚಾಲನೆ ನೀಡಿ ಹೋಗಿದ್ದಾರೆ. ಜಾನಪದ ಕಲಾ ತಂಡಗಳ ಮೆರವಣಿಗೆ ಮೆರಗು ತಂದಿದೆ. ನೃತ್ಯ ಕಲಾವಿದರ ರಂಗು ಜೋರಾಗಿದೆ. ಆದ್ರೆ, ಕಾರ್ಯಕ್ರಮದ ಆಯೋಜಕರು ಮಾಡಿದ ಯಡವಟ್ಟು ಈಗ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ನಾಲ್ಕು ಕಡೆಗಳಲ್ಲಿ ವಿವಿಐಪಿ ಹಾಗೂ ವಿಐಪಿ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿ ಹಾಕಲಾಗಿದ್ದ ನಾಲ್ಕು ನಾಮಫಲಕಗಳನ್ನು ನೋಡಿ ಆಹ್ವಾನಿತರು ಅರೆಕ್ಷಣ ಗಲಿಬಿಲಿಯಾಗಿದ್ದರು. ಯಾಕೆಂದರೆ ಆಹ್ವಾನಿತರು ಎನ್ನುವುದು
ಹೋಗಿ ಅವನೀತರು ಎಂಬ ನಾಮಫಲಕ ರಾರಾಜಿಸುತಿತ್ತು. ಇದನ್ನು ಕಂಡವರು ಒಳಗೊಳಗೆ ಗೊಣಗಿದರೆ, ಮತ್ತೆ ಕೆಲವರು ಈ ಗಲಾಟೆಯಲ್ಲಿ ಹೇಗೆ ಹೇಳೋದು? ಯಾರಿಗೆ ಹೇಳೋದು? ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಇಂಥ ಅಚಾತುರ್ಯ ಆದರೂ ಯಾರೂ ಗಮನಿಸದೇ ಇರುವುದು ವಿಷಾದದ ಸಂಗತಿ ಎಂದು ಹೇಳಿಕೊಂಡು ಸುಮ್ಮನೆ ಹೋದರು.

ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬಾಪೂಜಿ ಎಂಬಿಎ ಮೈದಾನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಯುವ ಜನೋತ್ಸವವ ರಾಜ್ಯಮಟ್ಟದ್ದು. ಆದ್ರೆ,
ಕನ್ನಡದ ಬಗ್ಗೆ ಅಸಡ್ಡೆ ವಹಿಸಿರುವುದಂತೂ ಸ್ಪಷ್ಟವಾಗಿದೆ. ರಾಜ್ಯ ಯುವಜನೋತ್ಸವದಲ್ಲಿ ಕಂಡು ಬಂದ ನಾಮಫಲಕಗಳು ಜನರ ಕೆಂಗಣ್ಣಿಗೂ ಗುರಿಯಾಯಿತು.

ಆಹ್ವಾನಿತರು ಎನ್ನುವ ಪದ ‘ಅವನೀತರು” ಅಂತಾಗಿದೆ. ಹಾಗಾದರೆ ನಮ್ಮ ಜಿಲ್ಲಾಡಳಿತ ಕನ್ನಡ ಭಾಷಾ ಜ್ಞಾನದಲ್ಲಿ ಇಷ್ಟು ಬಡವಾಗಿದೆಯೇ? ಇಷ್ಟು ಮಾತ್ರವಲ್ಲದೇ ಕಥೆ ಮತ್ತು ಕವನ ರಚನೆ ಸ್ಪರ್ಧೆಯಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಮಾಡಲು ಅವಕಾಶವಿತ್ತಂತೆ. ಇಲ್ಲಿ ನಮ್ಮ ರಾಜ್ಯಾಡಳಿತವೇ ಪರ ಭಾಷೆಯನ್ನು ಕನ್ನಡಿಗರ ಮೇಲೆ ಹೇರಿದೆ. ಬೇರೆ ಯಾರೋ ಹೇರಿದ್ದಲ್ಲ. ಕನ್ನಡಿಗರಾದ ನಮಗೆಲ್ಲರಿಗೂ ನೋವು ಕೊಡುವ ವಿಷಯವಿದು ಎಂದು ಕನ್ನಡ ಸಾಹಿತ್ಯ ಪರಿಷತ್ ನ ಕೆ.ರಾಘವೇಂದ್ರ ನಾಯರಿ ಬೇಸರ ವ್ಯಕ್ತಪಡಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment