SUDDIKSHANA KANNADA NEWS/ DAVANAGERE/ DATE-09-06-2025
ನವದೆಹಲಿ: ‘ಗೂಢಚಾರಿಣಿ’ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಏಪ್ರಿಲ್ 23ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದೆ.
ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಹರಿಯಾಣದ ಹಿಸಾರ್ ನ್ಯಾಯಾಲಯವು ಮತ್ತೊಮ್ಮೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಜೂನ್ 23 ರಂದು ಆಕೆ ಪ್ರಕರಣವನ್ನು ಮತ್ತೆ ವಿಚಾರಣೆಗೆ ತೆಗೆದುಕೊಳ್ಳಲಿದೆ.
ಆಕೆಯನ್ನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಮೇ 26 ರಂದು, ನಾಲ್ಕು ದಿನಗಳ ಪೊಲೀಸ್ ಬಂಧನದ ನಂತರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಕಳೆದ ವಾರ, ಪಾಕಿಸ್ತಾನ ಬೆಂಬಲಿತ ಬೇಹುಗಾರಿಕೆ ಜಾಲದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಮತ್ತೊಬ್ಬ ಯೂಟ್ಯೂಬರ್ ಜಸ್ಬೀರ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದರು.
ಜ್ಯೋತಿ ಜೊತೆ ಜಸ್ಬೀರ್ ನಿಯಮಿತವಾಗಿ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ. ಪಂಜಾಬ್ ಪೊಲೀಸರ ಪ್ರಕಾರ, ಜಸ್ಬೀರ್ ಸಿಂಗ್ ಪಾಕಿಸ್ತಾನಿ ಗುಪ್ತಚರ ಅಧಿಕಾರಿ ಶಕೀರ್ ಅಲಿಯಾಸ್ ಜಟ್ ರಾಂಧವಾ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ. ಈತ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗಾಗಿ ಕಾರ್ಯನಿರ್ವಹಿಸುತ್ತಿದ್ದನೆಂದು ಶಂಕಿಸಲಾದ ಭಾರತೀಯ ಮೂಲದ ವ್ಯಕ್ತಿ.