ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಫೆ. 17ಕ್ಕೆ ಆವರಗೊಳ್ಳದ ಶ್ರೀ ವೀರಭದ್ರೇಶ್ವರ ಮಹಾಸ್ವಾಮಿ ರಥೋತ್ಸವ ಸಂಭ್ರಮ

On: February 13, 2025 7:17 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-02-2025

ದಾವಣಗೆರೆ: ತಾಲೂಕಿನ ಆವರಗೊಳ್ಳದ ಶ್ರೀ ವೀರಭದ್ರೇಶ್ವರ ಮಹಾಸ್ವಾಮಿಯ ರಥೋತ್ಸವ ಫೆ. 17ರಂದು ವಿಜೃಂಭಣೆಯಿಂದ ನೆರವೇರಲಿದೆ. ಪುರವರ್ಗ ಹಿರೇಮಠದ ಪೀಠಾಧಿಪತಿ ಶ್ರೀ ಓಂಕಾರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ಸಾನಿಧ್ಯದಲ್ಲಿ ಜರುಗಲಿದೆ. ಫೆ. 20ರವರೆಗೆ ವಿವಿಧ ಉತ್ಸವಾದಿಗಳನ್ನು ಆಯೋಜಿಸಲಾಗಿದೆ.

ಶ್ರೀ ವೀರಭದ್ರೇಶ್ವರ ಮಹಾಸ್ವಾಮಿ ಸೇವಾ ಸಂಘ ಹಾಗೂ ಆವರಗೊಳ್ಳ ಗ್ರಾಮದ ಸದ್ಭಕ್ತರು ಮತ್ತು ಮಠಸ್ಥರು, ಆಡಳಿತ ಮಂಡಳಿ ಸಂಯುಕ್ತಾಶ್ರಯದಲ್ಲಿ ಈ ರಥೋತ್ಸವ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ. ಎಂ. ಷಣ್ಮುಖಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಫೆ. 17ರ ಸಂಜೆ 6 ಗಂಟೆಗೆ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಅದ್ಧೂರಿಯಾಗಿ ನಡೆಯಲಿದ್ದು, ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ. ರಾತ್ರಿ ಉಯ್ಯಾಲೆ ಮಂಟಪದಲ್ಲಿ ಸ್ವಾಮಿ ಆಸೀನರಾಗಲಿದ್ದು, ನಂತರ ವೀರಗಾಸೆ ಸೇವೆ ಭಕ್ತರಿಂದ ನೆರವೇರಲಿದೆ. 18ರಂದು ಬೆಳಿಗ್ಗೆ 8ಗಂಟೆಗೆ ಶ್ರೀ ಸ್ವಾಮಿಯ ಗುಗ್ಗಳ ಸೇವೆ, ಭಕ್ತರಿಂದ ಅದೇ ದಿನ ರಾತ್ರಿ 10 ಗಂಟೆಗೆ ಓಕಳಿ ಸೇವೆ ಮತ್ತು ಗಂಗಾಪೂಜೆ ನಂತರ ಉಯ್ಯಾಲೆ ಮಂಟಪದಲ್ಲಿ ಸ್ವಾಮಿ ಆಸೀನರಾಗಲಿದ್ದು, ವೀರಗಾಸೆ ಸೇವೆಯನ್ನೂ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

19ರಂದು ಬೆಳಿಗ್ಗೆ 10 ಗಂಟೆಗೆ ಸಕಲ ಬಿರುದಾವಳಿಗಳೊಂದಿಗೆ ಉಯ್ಯಾಲೆ ಮಂಟಪದಿಂದ ಶ್ರೀ ಸ್ವಾಮಿಯು ಗುಗ್ಗಳಗಳೊಂದಿಗೆ ಶ್ರೀ ರೇವಣಸಿದ್ದೇಶ್ವರ, ಶ್ರೀ ಬೀರಲಿಂಗೇಶ್ವರ ಸ್ವಾಮಿಗಳೊಡಗೂಡಿ ದೇವಸ್ಥಾನಕ್ಕೆ ಬಿಜಯಂಗೈಯ್ಯುವುದು. 20ರಂದು ಕಂಕಣ ವಿಸರ್ಜನೆ ವೈಭವೋಪೇತವಾಗಿ ನಡೆಯಲಿದ್ದು, ಭಕ್ತರು ತನು, ಮನ, ಧನದೊಂದಿಗೆ ಸಹಕರಿಸುವಂತೆ ಆಡಳಿತ ಮಂಡಳಿಯು ಮನವಿ ಮಾಡಿದೆ ಎಂದು ತಿಳಿಸಿದರು.

ರಥೋತ್ಸವದಲ್ಲಿ ಅಂಗಡಿ ಹಾಕುವವರು ಸಂಘದ ಅನುಮತಿ ಪಡೆದಿರಬೇಕು. ಅಂಥವರಿಗೆ ಮಾತ್ರ ಅವಕಾಶ ನೀಡಲಾಗುವುದು. ಸಂಜೆ 5 ಗಂಟೆಯೊಳಗೆ ವೀರಭದ್ರೇಶ್ವರ ಸ್ವಾಮಿ ದರ್ಶನ ಪಡೆಯಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಮಟಿಕಲ್ ವೀರಭದ್ರಸ್ವಾಮಿ ಮತ್ತಿತರರು ಹಾಜರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment