ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಎಸ್ ಎಸ್ ಎಂ @ 56, ಜನುಮದಿನ ಪ್ರಯುಕ್ತ ಸೆ.21,22ಕ್ಕೆ ರಾಜ್ಯಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿ: ಗಡಿಗುಡಾಳ್ ಮಂಜುನಾಥ್

On: September 16, 2023 2:28 PM
Follow Us:
SSM @56
---Advertisement---

SUDDIKSHANA KANNADA NEWS/ DAVANAGERE/ DATE:16-09-2023

ದಾವಣಗೆರೆ (Davanagere): ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ 56 ನೇ ಜನುಮದಿನದ ಪ್ರಯುಕ್ತ ಸೆ. 21 ಹಾಗೂ 22ರಂದು ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ದಾವಣಗೆರೆ (Davanagere) ಬಾಸ್ಕೆಟ್ ಬಾಲ್ ಕ್ಲಬ್ ನ ಉಪಾಧ್ಯಕ್ಷ ಗಡಿಗುಡಾಳ್ ಮಂಜುನಾಥ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎಸ್. ಮಲ್ಲಿಕಾರ್ಜುನ್ ರವರ ಹುಟ್ಟು ಹಬ್ಬದ ಪ್ರಯುಕ್ತ ಬಾಸ್ಕೆಟ್ ಬಾಲ್ ಸೇರಿದಂತೆ ಇತರೆ ಜನೋಪಯೋಗಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: 

ಭದ್ರಾ ಜಲಾಶಯ(Bhadra Dam)ದಿಂದ ಭದ್ರಾ ಬಲದಂಡೆ ನಾಲೆ ನೀರು ಬಂದ್: ಅಂತೂ ಇಂತೂ ಆನ್ ಅಂಡ್ ಆಫ್ ಜಾರಿ, ದಾವಣಗೆರೆ ಜಿಲ್ಲೆಯ ರೈತರ ಆಕ್ರೋಶ

ಸೆ. 21ರ ಸಂಜೆ 7 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಈ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ ಪುರುಷರ ವಿಭಾಗದ 8 ತಂಡಗಳು ಭಾಗವಹಿಸಲಿವೆ ಎಂದರು.

ಧಾರವಾಡ 2, ಚಿಕ್ಕಮಗಳೂರು 2, ಕಾರವಾರ 2, ದಾವಣಗೆರೆ(Davanagere)ಯ 2 ತಂಡಗಳು ಭಾಗವಹಿಸಲಿದ್ದು. 18 ವಯೋಮಿತಿಯ ಬಾಲಕರ ವಿಭಾಗದಲ್ಲಿ 6 ತಂಡಗಳು ಪಾಲ್ಗೊಳ್ಳಲಿವೆ. ಧಾರವಾಡದಿಂದ- ಸಾಯಿ ಹಾಸ್ಟೆಲ್, ಇನ್ಸ್ ಪೈರ್ ಸ್ಪೋರ್ಟ್ಸ್ ಕ್ಲಬ್ ಹಾಗೂ ದಾವಣಗೆರೆ ಮಲ್ಲ ಸಜ್ಜನ್ ಬಾಸ್ಕೆಟ್ ಬಾಲ್ ಕ್ಲಬ್ ತಂಡಗಳು ಭಾಗವಹಿಸಲಿವೆ. 16 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ 4 ತಂಡಗಳು ಬರಲಿದ್ದು, ಬೆಂಗಳೂರು -ವಿದ್ಯಾನಗರ ಸ್ಪೋರ್ಟ್ಸ್ ಹಾಸ್ಟೆಲ್, ವಿಜಯಪುರದ ಡಿವೈ.ಇ.ಎಸ್, ದಾವಣಗೆರೆ ಮಲ್ಲಸಜ್ಜನ್ ಬಾಸ್ಕೆಟ್ ಬಾಲ್ ಕ್ಲಬ್, ದಾವಣಗೆರೆ ಬಾಸ್ಕೆಟ್ ಬಾಲ್ ಕ್ಲಬ್ ಭಾಗವಹಿಸಲಿವೆ. ಈ ಪಂದ್ಯಾವಳಿಯಲ್ಲಿ ಸುಮಾರು 250-300 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ಈ ಎಲ್ಲಾ ಕ್ರೀಡಾಪಟುಗಳಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಗೆದ್ದ ತಂಡಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸೆ. 22 ರಂದು ಸಂಜೆ 7 ಗಂಟೆಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು, ಸಂಜೆ 7 ಗಂಟೆಗೆ ಪಂದ್ಯಾವಳಿಯಲ್ಲಿ ಜಯಗಳಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆಯನ್ನು ಮಾಡಲಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಿ. ರಾಮಮೂರ್ತಿ, ಕಿರಣ್ ಕುಮಾರ್, ಆರ್. ವೀರೇಶ್, ಎಸ್. ಎಲ್. ಪ್ರಸನ್ನ, ಆರ್. ದರ್ಶನ್, ಸಚಿನ್ ರಾವ್ ಘಾಟ್ಗೆ ಮತ್ತಿತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment