SUDDIKSHANA KANNADA NEWS/ DAVANAGERE/ DATE:25-10-2024
ದಾವಣಗೆರೆ: ಮಾಯಕೊಂಡದ ಆನಗೋಡು ಹೋಬಳಿಯ ಹೊನ್ನಾನಾಯ್ಕನಹಳ್ಳಿ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಲ್ಲಿಕಾರ್ಜುನ್ ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ನಷ್ಟದಿಂದಾಗಿ ಮಾಡಿದ್ದ ಬ್ಯಾಂಕ್ ಹಾಗೂ ಕೈ ಸಾಲ ತೀರಿಸಲು ಆಗದೇ ಸಾವಿಗೆ ಶರಣಾಗಿದ್ದಾರೆ ಎಂದು ಮೃತನ ಪುತ್ರ ಅಜಯ್ ಪೊಲೀಸರಿಗೆ ತಿಳಿಸಿದ್ದಾರೆ.
ಒಂದು ಎಕರೆ ಜಮೀನು ಹೊಂದಿದ್ದ ಮಲ್ಲಿಕಾರ್ಜುನ್ ಅವರು ಸಾಲ ಮಾಡಿ ಬೆಳೆ ಬೆಳೆದಿದ್ದರು. ಕಳೆದ ನಾಲ್ಕು ವರ್ಷಗಳಿಂದ ಬೆಳೆ ಉತ್ತಮವಾಗಿ ಬಂದಿರಲಿಲ್ಲ. ಈ ಬಾರಿ ಮಳೆಯು ಜಾಸ್ತಿಯಾದ್ದರಿಂದ ಜಮೀನು ಜೌಗು ಹಿಡಿದು ಬೆಳೆ ಹಾಳಾಗಿತ್ತು. ಇದರಿಂದ ಬೇಸತ್ತು ಅಪ್ಪ ಸಾವಿಗೆ ಶರಣಾಗಿದ್ದಾರೆ ಎಂದು ಅಜಯ್ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಹಾಗೂ ಊರಿನಲ್ಲಿ ಜನರ ಬಳಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.