ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸ್ಪೆಷಲ್ ಆಪರೇಷನ್ ಗ್ರೂಪ್ ಅಧಿಕಾರಿ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

On: December 16, 2024 2:28 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-12-2024

ಕೊಚ್ಚಿ: ಕೇರಳದ ಪೊಲೀಸ್ ವಿಶೇಷ ಶಿಬಿರದಲ್ಲಿ ಗುಂಡಿನ ಗಾಯಗಳೊಂದಿಗೆ ಸ್ಪೆಷಲ್ ಆಪರೇಷನ್ ಗ್ರೂಪ್ ಅಧಿಕಾರಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕೇರಳದ ಸ್ಪೆಷಲ್ ಆಪರೇಷನ್ ಗ್ರೂಪ್ ಅಧಿಕಾರಿಯೊಬ್ಬರು ಮಲಪ್ಪುರಂ ಕ್ಯಾಂಪ್ ಕಚೇರಿಯಲ್ಲಿ ಗುಂಡಿನ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ವರದಿಗಳು ಕೆಲಸದ ಒತ್ತಡಕ್ಕೆ ಸಂಬಂಧಿಸಿದಂತೆ
ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಭಾನುವಾರ ರಾತ್ರಿ 8.50 ಕ್ಕೆ ಈ ಘಟನೆ ಸಂಭವಿಸಿದ್ದು, ವಿನೀತ್ ಕ್ಯಾಂಪ್ ಆಫೀಸ್‌ನ ವಾಶ್‌ರೂಮ್‌ನಲ್ಲಿ ಸ್ವಯಂ ಪ್ರೇರಿತ ಗುಂಡೇಟಿನ ಗಾಯದೊಂದಿಗೆ ಪತ್ತೆಯಾಗಿದ್ದಾನೆ. ಗುಂಡಿನ ಸದ್ದು ಕೇಳಿದ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿ ಕೂಡಲೇ ಮಂಜೇರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ವಿನೀತ್‌ನ ಸಾವು ಆತ್ಮಹತ್ಯೆ ಆಗಿರಬಹುದು, ಕೆಲಸ ಸಂಬಂಧಿತ ಒತ್ತಡಕ್ಕೆ ಒಳಗಾಗಿ ಗುಂಡು ಹಾರಿಸಿಕೊಂಡಿರಬಹುದು ಎಂದು ಹೇಳಲಾಗಿದೆ. ತನ್ನ ಗರ್ಭಿಣಿ ಪತ್ನಿಯನ್ನು ನೋಡಿಕೊಳ್ಳಲು ರಜೆಗಾಗಿ ಅರ್ಜಿ ಸಲ್ಲಿಸಿದ್ದರು ಆದರೆ ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಅವರು ಇತ್ತೀಚೆಗೆ ಯಾವುದೇ ರಜೆ ತೆಗೆದುಕೊಳ್ಳದೆ 40 ದಿನಗಳ ತೀವ್ರತರವಾದ ತರಬೇತಿಗೆ ಒಳಗಾಗಿದ್ದರು, ಇದು ಅವರ ದುಃಖವನ್ನು ಹೆಚ್ಚಿಸಿರಬಹುದು.

ವಿನೀತ್ ಸಾವಿನ ಹಿಂದಿನ ಕಾರಣಗಳನ್ನು ಪೊಲೀಸರು ಅಧಿಕೃತವಾಗಿ ಖಚಿತಪಡಿಸಿಲ್ಲ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಮೃತದೇಹವನ್ನು ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಅರೀಕೋಡು ಪೊಲೀಸರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಮರಣೋತ್ತರ ಪರೀಕ್ಷೆ ಸೇರಿದಂತೆ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಪಾರ್ಥಿವ ಶರೀರವನ್ನು ವಿನೀತ್ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment