SUDDIKSHANA KANNADA NEWS/ DAVANAGERE/ DATE:18-01-2025
ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ, ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್ ಅಹಮದ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ನಿವಾಸದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಜೊತೆ ಕುಶಲೋಪರಿ ನಡೆಸಿದರು. ಈ ವೇಳೆ ಮಾತನಾಡಿದ ಸೈಯದ್ ಸೈಫುಲ್ಲಾ ಅವರು ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದಾರೆ. ನಮ್ಮೊಂದಿಗೆ ಚೆನ್ನಾಗಿಯೇ ಮಾತನಾಡಿದರು. ಆದಷ್ಟು ಬೇಗ ದಾವಣಗೆರೆಗೆ ಬರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ಶಾಮನೂರು ಶಿವಶಂಕರಪ್ಪರು ಮಾತನಾಡಿ ಈಗ ಚೇತರಿಸಿಕೊಂಡಿದ್ದೇನೆ. ಏನೂ ತೊಂದರೆ ಇಲ್ಲ. ಬೆಂಗಳೂರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ. ನೀವು ಬಂದಿದ್ದು ಖುಷಿಯಾಯಿತು ಎಂದು ಹೇಳಿದರು.
ಮನೆಯಲ್ಲಿದ್ದು ಆರಾಮಾಗಿದ್ದೇನೆ, ಆತಂಕ ಪಡುವ ಅಗತ್ಯ ಏನಿಲ್ಲ. ಸ್ವಲ್ಪ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿ ಈಗ ಗುಣಮುಖನಾಗಿ ಡಿಸ್ಚಾರ್ಜ್ ಆದ ಬಳಿಕ ಮನೆಯಲ್ಲಿಯೇ ಇದ್ದೇನೆ ಎಂದು ಶಾಮನೂರು ಶಿವಶಂಕರಪ್ಪ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸೈಯದ್ ರಫಿಕ್, ಸೈಯದ್ ಜುಫಿಶಾನ್, ಸೈಯದ್ ಮುನಾವರ್, ಸೈಯದ್ ಜುಬೇರ್ ಮತ್ತಿತರರು ಹಾಜರಿದ್ದರು.