ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉಪ್ಪಿನಕಾಯಿ ಕೇಳುವ ನೆಪದಲ್ಲಿ ಮಹಿಳೆ ಕೆನ್ನೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ…!

On: December 18, 2023 10:58 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-12-2023

ದಾವಣಗೆರೆ: ಉಪ್ಪಿನಕಾಯಿ ಕೇಳುವ ನೆಪದಲ್ಲಿ ಮಹಿಳೆಯ ಕೆನ್ನೆಗೆ ಕಚ್ಚಿ ಅತ್ಯಾಚಾರಕ್ಕೆ ವ್ಯಕ್ತಿಯೊಬ್ಬ ಯತ್ನಿಸಿರುವ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

48 ವರ್ಷದ ಆರೋಪಿ ಮಂಜಪ್ಪ ಎಂಬಾತನೇ ಈ ಕೃತ್ಯ ಎಸಗಿ ಎಸ್ಕೇಪ್ ಆದ ಆರೋಪಿ. ಮಹಿಳೆಯು ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ್ದ ಆರೋಪಿಯು ಮನೆಗೆ ಬಂದು ಉಪ್ಪಿನಕಾಯಿ ಕೇಳಿದ್ದಾನೆ. ಬಳಿಕ ಇದ್ದಕ್ಕಿದ್ದಂತೆ ಮಹಿಳೆಯ ಕೆನ್ನೆ ಕಚ್ಚಿದ್ದಾನೆ. ಆ ಬಳಿಕ ಅತ್ಯಾಚಾರಕ್ಕೂ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ.

ಮಹಿಳೆಯ ಕೆನ್ನೆ ಕಚ್ಚಿದ ಬಳಿಕ ಅತ್ಯಾಚಾರಕ್ಕೂ ಯತ್ನ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಮಹಿಳೆಯು ಆರೋಪಿಯಿಂದ ತಪ್ಪಿಸಿಕೊಳ್ಳಲು ಜೋರಾಗಿ ಕಿರುಚಿದ್ದಾರೆ. ಆಗ ಆರೋಪಿಯು ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಪ್ರತಿಭಟನೆ:

ಆರೋಪಿಯನ್ನು ಆದಷ್ಟು ಬೇಗ ಬಂಧಿಸಬೇಕು ಎಂದು ಒತ್ತಾಯಿಸಿ ಮಹಿಳೆಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಬಂಧಿಸಬೇಕು. ದಾವಣಗೆರೆಯಲ್ಲಿ ಈ ಹಿಂದೆಯೂ ಈ ರೀತಿಯ ಘಟನೆ ನಡೆದಿತ್ತು. ಮತ್ತೆ ಈ ರೀತಿಯ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಆರೋಪಿ ಹಿಡಿದು ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಮಹಿಳೆಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಒತ್ತಾಯಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment