ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಗು ಕೊಂದಿದ್ದ ತಾಯಿ ಬಂಧಿಸಿದ ಪೊಲೀಸರು: ಬೆಂಗಳೂರಿನ ಮ್ಯಾನ್ ಸ್ಟಾರ್ಟ್ ಆಫ್ ಸಿಇಒ ಸಿಕ್ಕಿಬಿದ್ದಿದಾದರೂ ಹೇಗೆ…?

On: January 9, 2024 1:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-01-2024

ಚಿತ್ರದುರ್ಗ: ಹೆತ್ತ ಕರುಳನ್ನೇ ಕಿವುಚಿ ಹಾಕಿದ್ದ ಕ್ರೂರ ತಾಯಿ ಅಂತೂ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

ಗೋವಾದ ಅಪಾರ್ಟ್ಮಟ್ ನಲ್ಲಿ‌ ಮಗುವನ್ನು ಕೊಂದಿದ್ದ ತಾಯಿ ಬ್ಯಾಗ್ ನಲ್ಲಿ ಮಗುವಿನ ಶವ ಕರ್ನಾಟಕಕ್ಕೆ ತರುವಾಗ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು. ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ ಐಮಂಗಲ
ಪೊಲೀಸರಿಂದ ಬಂಧಿಸಲಾಗಿದೆ.

ಸುಚೇತನಾ ಸೇಠ್ ಪೊಲೀಸರಿಗೆ ಸೆರೆ ಸಿಕ್ಕ ಹಂತಕ ತಾಯಿ. ಗೋವಾದ ಅಪಾರ್ಟ್ ಮೆಂಟ್ ನಲ್ಲಿ ಮಗುವನ್ನು ಕೊಂದಿದ್ದ ತಾಯಿ ಬ್ಯಾಗ್ ನಲ್ಲಿ ಮಗುವಿನ ಶವ ಕರ್ನಾಟಕಕ್ಕೆ ತರುವಾಗ ಪೊಲೀಸ್ ವಶಕ್ಕೆ ಪಡೆದಿದ್ದು, ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಗೋವಾ ಕ್ಯಾಂಡೋಲಿಮ್ ಸರ್ವೀಸ್ ಅಪಾರ್ಟಮೆಂಟ್ ನಲ್ಲಿ ಘಟನೆ ನಡೆದಿದ್ದು, ಬೆಂಗಳೂರಿಗೆ ತೆರಳುತ್ತಿದ್ದ ತಾಯಿ ಸುಚನಾ ಸೇಠಳನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಕರ್ನಾಟಕಕ್ಕೆ‌ ಹಿಂತಿರುಗಲು ಟ್ಯಾಕ್ಸಿ ಬುಕ್ ಮಾಡಿದ್ದ ಸುಚನಾ ಸೇಠ್ ಬೆಂಗಳೂರಿನ ಮ್ಯಾನ್ ಸ್ಟಾರ್ಟ್ ಆಫ್ ಸಂಸ್ಥಾಪಕೆ ಹಾಗೂ ಸಿಇಓ ಕೂಡ ಆಗಿದ್ದಳು. ಅಪಾರ್ಟಮೆಂಟ್ ಸ್ವಚ್ಛಗೊಳಿಸುವ ವೇಳೆ ಭದ್ರತಾ ಸಿಬ್ಬಂದಿಯಿಂದ ಘಟನೆ ಬಹಿರಂಗವಾಗಿತ್ತು.

ಮನೆಯಲ್ಲಿ ರಕ್ತದ ಕಲೆ‌ ಇರುವ ಕುರಿತು ಕ್ಯಾಲಂಗೂಟ್ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಎಚ್ಚತ್ತ ಭದ್ರತಾ ಸಿಬ್ಬಂದಿಯಿಂದ ಪೊಲೀಸರಿಗೆ ಮಾಹಿತಿ ಕೊಡಲಾಗಿತ್ತು. ಗೋವಾ ಪೊಲೀಸರಿಂದ ಚಿತ್ರದುರ್ಗದ ಐಮಂಗಲ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಮಹಿಳೆಯನ್ನು ಬಂಧಿಸಲಾಗಿದೆ. ತಡರಾತ್ರಿ ಆರೋಪಿ ಸುಚನಾ ಸೇಠ್ ರನ್ನು ಗೋವಾ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ. ಆದ್ರೆ, ಶವಾಗಾರದಲ್ಲಿ ಮಗು ಶವ ಇದ್ದು, ಮರಣೋತ್ತರ ಪರೀಕ್ಷೆ ಇನ್ನೂ ಮುಕ್ತಾಯ ಕಂಡಿಲ್ಲ. ಸಂಬಂಧಿಕರು ಇನ್ನೂ ಬಾರದಿರುವ ಕಾರಣ ಆಗಿಲ್ಲ.ಒಟ್ಟಿನಲ್ಲಿ ತನ್ನ ಮಗುವನ್ನೇ ಕೊಂದಿದ್ದ ಹಂತಕಿಗೆ ತಕ್ಕ ಶಿಕ್ಷೆಯಾಗಬೇಕು. ಗಲ್ಲಿಗೇರಿಸಬೇಕು. ಉನ್ನತ ಹುದ್ದೆಯಲ್ಲಿದ್ದರೂ ಮಗು ಕೊಂದ ಈಕೆ ಬದುಕಿರಬಾರದು ಎಂದು ಜನರು ಆಗ್ರಹಿಸಿದ್ದಾರೆ.

 

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment