ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Inquiry: ಬಿಜೆಪಿ ಭ್ರಷ್ಟಾಚಾರ ಆರೋಪ ತನಿಖೆಗೆ ರಾಜ್ಯ ಸರ್ಕಾರ ಅಸ್ತು: ಕೋವಿಡ್ ತನಿಖೆಗೆ ನ್ಯಾ. ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ

On: August 26, 2023 5:43 PM
Follow Us:
Siddaramaiah
---Advertisement---

SUDDIKSHANA KANNADA NEWS/ DAVANAGERE/ DATE:26-08-2023

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಲಂಚಗುಳಿತನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆ (Inquiry) ನಡೆಸಲು ವಿಚಾರಣಾ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ಕೋವಿಡ್ ಸೋಂಕು ಕಾಣಿಸಿಕೊಂಡಾಗಲೂ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆಯೂ ತನಿಖಾ ಆಯೋಗ ರಚನೆಗೆ ಸರ್ಕಾರ ತೀರ್ಮಾನಿಸಿದೆ. ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಸರ್ಕಾರವು ಸೂಚಿಸಿದೆ.

ತೆಗೆದುಕೊಂಡ ನಿರ್ಣಯಗಳೇನು..?

ಕೋವಿಡ್ -19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಔಷಧಿ, ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಹಾಗೂ ಇತರ ವಿಷಯಗಳ ಕುರಿತು 2021 ರ ಜುಲೈ- ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಬಗ್ಗೆ ಚರ್ಚಿಸಲಾಗಿದೆ,

ಈ ಪ್ರಕರಣದಲ್ಲಿ ತನಿಖೆ ನಡೆಸುವುದು ಸೂಕ್ತವೆಂದು ಮನಗಂಡು Commission of Inquiry Act 1952 ರ ನಿಯಮ 3 ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.

ಈ ಸುದ್ದಿಯನ್ನೂ ಓದಿ: 

Gruhalakshmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದೀರಾ: 2 ಸಾವಿರ ರೂಪಾಯಿ ನಿಮ್ಗೆ ಬರುತ್ತೋ ಇಲ್ಲವೋ.. ಈ ಲಿಂಕ್ ಕ್ಲಿಕ್ ಮಾಡಿ ತಿಳಿದುಕೊಳ್ಳಿ…!

 

ಕೊರೊನಾ ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021 ರ ಜುಲೈ , ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಲಾಗಿದೆ.

2021 ಜುಲೈ- ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಕುರಿತು ವಿಚಾರಣಾ ಆಯೋಗವು Commissions of Inquiry Act 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ ಹಾಗೂ ತನಿಖೆಯನ್ನು 03 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದ್ದೆಂದು ಸರ್ಕಾರವು ಆಪೇಕ್ಷಿಸುತ್ತದೆ.

ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ತನಿಖೆಯನ್ನು ಪೂರ್ಣಗೊಳಿಸಲು ಹಾಗೂ ವೈದ್ಯರು ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕಸಲಹೆಗಾರರನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳು ಸಹಕರಿಸತಕ್ಕದ್ದು

ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟಂತೆ ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ತನಿಖೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು, ದಾಖಲಾತಿಗಳು ಸೇರಿ ಇತ್ಯಾದಿ ಒದಗಿಸತಕ್ಕದ್ದು ಹಾಗೂ ಸ್ಥಳ ತನಿಖೆ ಸಂದರ್ಭದಲ್ಲಿ ಖುದ್ದು ಹಾಜರಿದ್ದು , ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು.

ವಿಚಾರಣಾ ಆಯೋಗಕ್ಕೆ ಅಗತ್ಯವಿರುವ ಸಿಬ್ಬಂದಿ, ಸಾಮಗ್ರಿಗಳು, ವಾಹನಗಳ ವ್ಯವಸ್ಥೆ ಹಾಗೂ ಕಛೇರಿ ಮತ್ತು ಅಗತ್ಯ ಸಲಕರಣೆಗಳನ್ನು ಒದಗಿಸತಕ್ಕದ್ದು.ಆಯೋಗಕ್ಕೆ ಭತ್ಯೆ,, ಸೌಲಭ್ಯಗಳನ್ನು ನಿಯಮಾನುಸಾರ ಕಲ್ಪಿಸುವುದು.

ಈ ವಿಚಾರಣಾ ಆಯೋಗಕ್ಕೆ ಅಗತ್ಯವಿದ್ದಲ್ಲಿ ಅಧ್ಯಕ್ಷರ ಕೋರಿಕೆಯ ಮೇರೆಗೆ ಗುಣಮಟ್ಟ ಪರೀಕ್ಷೆಗೆ ನೋಂದಾಯಿತ 3 ನೇ ಸ್ವತಂತ್ರ ಸಂಸ್ಥೆಯ ( 3 Party Assistance ) ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸುವುದು.

ಆಯೋಗವು ಬೆಂಗಳೂರು ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಕಛೇರಿಗೆ ಸ್ಥಳಾವಕಾಶ ಆಯೋಗದ ಮಾನ್ಯ ನ್ಯಾಯಾಧೀಶರಿಗೆ, ಆಯೋಗದ ಕಾರ್ಯದರ್ಶಿಯವರಿಗೆ ಹಾಗೂ ಅಧಿಕಾರಿ, ಸಿಬ್ಬಂದಿಗೆ ವಾಹನಗಳು, ಪೀಠೋಪಕರಣಗಳು, ದೂರವಾಣಿ ವ್ಯವಸ್ಥೆ ಸೇರಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಈ ಇಲಾಖೆಯವರು ಕ್ರಮ ಕೈಗೊಳ್ಳತಕ್ಕದ್ದು ಎಂದು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿ ಪ್ರಕಟಿಸಿದೆ.

ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್‌ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಅವರು ಪ್ರಧಾನ ಮಂತ್ರಿ ಹಾಗೂ ನಿಕಟಪೂರ್ವ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ, ರಾಜ್ಯದಲ್ಲಿ ಪುಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಧತಿ, ಬಾಕಿ ಮೊತ್ತ ಬಿಡುಗಡ ಮತ್ತು ಟೆಂಡರ್ ಪ್ರಕ್ರಿಯೆ ಸೇರಿ ಇತ್ಯಾದಿಗಳಲ್ಲಿ ಶೇ.40 ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಲಂಚಗುಳಿತನ, ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿದ್ದರು.

ಈ ಮನವಿಗಳಲ್ಲಿ ಪುಮುಖವಾಗಿ ಕಾಮಗಾರಿಗಳನ್ನು ಪ್ರಾರಂಭಿಸುವ ಪೂರ್ವದಲ್ಲಿಯೇ ಶೇಕಡಾ 25ರಿಂದ 30ರವರೆಗೆ ಕೆಲವು ಸಾರ್ವಜನಿಕ ಪ್ರತಿನಿಧಿಗಳಿಗೆ ಮತ್ತು ಇತರರಿಗೆ ಲಂಚ ನೀಡಬೇಕಾದ ಸ್ಥಿತಿಯ ಬಗ್ಗೆ ಕಾಮಗಾರಿಗಳು ಪೂರ್ಣವಾದ ನಂತರ ಬಾಕಿ ಬಿಲ್ಲುಗಳನ್ನು ಪಾವತಿಸಲು ಶೇ. 5ರಿಂದ 6 ರವರೆಗೆ ಎಲ್.ಓ.ಸಿ. ಬಿಡುಗಡೆಗೆ ಹೊರ ರಾಜ್ಯದ ಗುತ್ತಿಗೆದಾರರಿಗೆ ಪ್ಯಾಕೇಜ್ ಪದ್ಧತಿಯಿಂದ ಅನುಕೂಲ ಮಾಡಲಾಗುತ್ತಿರುವ ಬಗ್ಗೆ ಹಾಗೂ ಪ್ರಮುಖವಾಗಿ 40 % ರಷ್ಟು ಕಮಿಷನ್ ಕೇಳುತ್ತಿರುವ ಬಗ್ಗೆ ಹೇಳಿದ್ದರು.

ಆದರೆ, ಇದುವರೆಗೂ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿ ನಡೆಸುವ ಇಲಾಖೆಗಳಾದ ಲೋಕೋಪಯೋಗಿ ಇಲಾಖೆ,  ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ , ಪುನರ್‌ ಅಂದಾಜು ( Revised Estimate)ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ದೂರುದಾರ ಡಿ. ಕೆಂಪಣ್ಣ ಆರೋಪದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ತನಿಖೆಯ ಅಗತ್ಯವಿರುವುದನ್ನು ಮನಗಂಡು Commissions of Inquiry Act 1952 ರ ನಿಯಮ 3 ರ ಉಪ ನಿಯಮ 1 ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment