SUDDIKSHANA KANNADA NEWS/ DAVANAGERE/ DATE:25-08-2024
ದಾವಣಗೆರೆ: ಪೈಪ್ಸ್ ಮತ್ತು ಸ್ಪಿಂಕ್ಲರ್ ತಯಾರಿಕಾ ಘಟಕದಲ್ಲಿ ತಾಮ್ರದ ತಂತಿ ಮತ್ತು ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, 12 ಲಕ್ಷದ ರೂಪಾಯಿ ಮೌಲ್ಯದ ತಾಮ್ರದ ತಂತಿ, ಎಲೆಕ್ಟ್ರಿಕಲ್ ಸಾಮಗ್ರಿಗಳು, ಕೃತ್ಯಕ್ಕೆ ಬಳಸಿದ್ದ ಓಮಿನಿ ಮತ್ತು 2 ಬೈಕ್ ಗಳ ಜಪ್ತಿ ಮಾಡಿದ್ದಾರೆ.
ಹರಿಹರ ನಗರ ವಾಸಿಗಳಾದ ಸೈಯದ್ ನೂರುದ್ದೀನ್, ಮೊಹ್ಮದ್ ಆಸೀಫ್, ಇರ್ಷದ್ ಬಂಧಿತ ಆರೋಪಿಗಳು. 8 ಲಕ್ಷ ರೂಪಾಯಿ ಮೌಲ್ಯದ ತಾಮ್ರದ ತಂತಿ, ಎಲೆಕ್ರ್ಟಿಕಲ್ ಸಾಮಗ್ರಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಟ್ಟು ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಓಮಿನಿ ಮತ್ತು 2 ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿಕೊಡಲಾಗಿದೆ.
ಕಳೆದ 20ರಂದು ರಾತ್ರಿ 10ಗಂಟೆಗೆ ಹರಿಹರ ತಾಲೂಕಿನ ಹನಗವಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿನ ಕೊಟ್ರೇಶ್ ನಾಯ್ಕರ ಒಡೆತನದ ಗ್ರೀನ್ ರಾಯಲ್ ಪೈಪ್ಸ್, ಡ್ರಿಪ್ ಹಾಗೂ ಸ್ಪಿಂಕ್ಲರ್ ತಯಾರಿಕಾ ಘಟಕದಲ್ಲಿ ಮಿಷನರಿಗೆ ಬಳಸಿದ್ದ ಪವರ್ ಸಪ್ಲೈ ಮತ್ತು ಕಾಪರ್ ಕೇಬಲ್ ಹಾಗೂ ಸಲಕರಣೆಗಳನ್ನು ಕಳ್ಳತನವಾದ ಕುರಿತಂತೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿತರ ಪತ್ತೆ ಕಾರ್ಯಕ್ಕೆ ಎಎಸ್ಪಿಗಳಾದ ವಿಜಯ್ ಕುಮಾರ್ ಸಂತೋಷ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಸವರಾಜ್ ಬಿ. ಎಸ್. ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ನೇತೃತ್ವದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಮಂಜುನಾಥ ಎಸ್. ಕುಪ್ಪೇಲೂರು, ಸಿಬ್ಬಂದಿ ಸರಳ ತಿಪ್ಪೇಸ್ವಾಮಿ, ನಾಗರಾಜ. ರಾಮಚಂದ್ರ್ರಪ್ಪ, ಕರಿಯಪ್ಪ, ರಮೇಶ, ದಾದಾಪೀರ್, ನೀಲಮೂರ್ತಿ, ಸತೀಶ, ಲಿಂಗರಾಜ, ಅರ್ಜುನ ರಾಯಲ್, ಅನಿಲ್ ಕುಮಾರ್ ನಾಯ್ಕ, ರಿಜ್ವಾನ್ ನಾಸೂರ್, ಗಂಗಾಧರ, ಪ್ರಸನ್ನಕಾಂತ, ಸುರೇಶ, ಅರ್ಜುನ್ ನಂದ್ಯಾಲ, ಋಷಿರಾಜ, ನಾಗರಾಜ, ರಾಮಾಂಜನೇಯ, ಸತೀಶ, ದ್ವಾರಕೇಶ, ಹನುಮಂತ, ಸಿದ್ದಪ್ಪ, ಮುರುಳಿ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಪಿಎಸ್ಐ ಮಂಜುನಾಥ ಎಸ್. ಕಲ್ಲೆದೇವರ, ಸಿಬ್ಬಂದಿ ಅಖ್ತರ್ ಎಸ್. ಎಂ., ನಾಗರಾಜ ಕುಂಬಾರ, ವೀರೇಶ ವಿ., ಶಾಂತರಾಜ, ಜಿಲ್ಲಾ ಪೊಲೀಸ್ ಶ್ವಾನದಳದ ಸಿಬ್ಬಂದಿಯವರನ್ನೊಳಗೊಂಡ ತಂಡವು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿತ್ತು. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.