SUDDIKSHANA KANNADA NEWS/ DAVANAGERE/ DATE:16-03-2025
ದಾವಣಗೆರೆ: ಅಕ್ರಮವಾಗಿ ಗೋವು ಸಾಗಾಟ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರೇ ಖುದ್ದು ಫೀಲ್ಡ್ ಗೆ ಇಳಿದು ಗೋವುಗಳ ರಕ್ಷಣೆ ಮಾಡಿದ ಘಟನೆ ನಡೆದಿದೆ.
ಹೆದ್ದಾರಿಯಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದು ಗೋವು ರಕ್ಷಣೆ ಮಾಡಿದ ಪ್ರಮೋದ್ ಮುತಾಲಿಕ್ ಅವರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ ನಗರದ ಹಳೇ ಕುಂದುವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಸಾಯಿ ಖಾನೆಗೆ ಹೊಯ್ಯುತ್ತಿರುವ ಶಂಕೆ ಹಿನ್ನೆಲೆ ಪ್ರಮೋದ್ ಮುತಾಲಿಕ್ ಅವರೇ ವಾಹನ ತಡೆದರು. ಸಣ್ಣ ಗಾಡಿಯಲ್ಲಿ ನಾಲ್ಕು ದೊಡ್ಡ ಹಸು ತುಂಬಿಕೊಂಡಿದ್ದ ವ್ಯಕ್ತಿ ಹೋಗುತ್ತಿದ್ದ. ಇದೇ ವೇಳೆ ಹುಬ್ಬಳ್ಳಿಯಿಂದ ದಾವಣಗೆರೆಗೆ ಆಗಮಿಸುತ್ತಿದ್ದ ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು, ಅನುಮಾನಗೊಂಡು ಗಾಡಿ ನಿಲ್ಲಿಸಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ದಾಖಲೆ ಇಲ್ಲದೇ ಹಸುಗಳ ಸಾಗಟ ಯತ್ನ ಮಾಡುತ್ತಿರುವುದು ಈ ವೇಳೆ ಗೊತ್ತಾಗಿದೆ. ಖುದ್ದು ನಿಂತು ವಿದ್ಯಾನಗರ ಪೊಲೀಸ್ ಠಾಣೆಗೆ ಪ್ರಮೋದ್ ಮುತಾಲಿಕ್ ಅವರು ಮಾಹಿತಿ ನೀಡಿದರು. ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು.
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಖಾಸಾಯಿ ಖಾನೆಗೆ ಸಾಗಾಟ ಆಗ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಈ ರೀತಿ ಆಗುತ್ತಿದೆ. ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಆಗಬೇಕು ಎಂದು ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.