SUDDIKSHANA KANNADA NEWS/ DAVANAGERE/ DATE-30-06-2025
ದಾವಣಗೆರೆ: ಎಂಪೈರ್ ಟ್ರೇಡಿಂಗ್ ಕಂಪೆನಿಯಲ್ಲಿ ಹಣ ತೊಡಗಿಸಿಕೊಂಡು ಜನರಿಂದ ಪಡೆದ ಹಣ ವಾಪಸ್ ನೀಡದೇ ವಂಚನೆ ಪ್ರಕರಣ ದಾಖಲಾಗಿದೆ.
ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ಮೋಸ ಮಾಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

READ ALSO THIS STORY: ದಾವಣಗೆರೆಯ ಅಶೋಕನಗರದ ಹೊರವಲಯದ ಮನೆಯಲ್ಲಿ ವೇಶ್ಯಾವಾಟಿಕೆ: ಆರೋಪಿ ಬಂಧನ!
ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ರಾಮಪೂಜಾರಪ್ಪರ ಪುತ್ರ ಗಜಾನನ ಮತ್ತು ಆತನ ಸ್ನೇಹಿತರ ವಿರುದ್ಧ ದೂರು ದಾಖಲಾಗಿದೆ. ಗಜಾನನು ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶ ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟಿದ್ದಾನೆ.
ನಂತರದ ದಿನಗಳಲ್ಲಿ ಲಾಭಾಂಶನ್ನು ಮತ್ತು ಅಸಲಿನ ಹಣ ಕೊಡದೇ ಒಟ್ಟು ಸಾರ್ವಜನಿಕರಿಂದ 31,50,000 ರೂಗಳನ್ನು ಕಟ್ಟಿಸಿಕೊಂಡು 61,62.800 ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು 37,33,500 ರೂಪಾಯಿ 6 ತಿಂಗಳ ಲಾಭಾಂಶದ ಹಣ ಮತ್ತು ಅಸಲು ಹಣ ಕೊಡದೇ ಮೋಸ ಮಾಡಿದ್ದಾನೆ ಎಂದು ಕೆ. ಹರೀಶ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ ಸ್ಪೆಕ್ಟರ್ ಅವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.