Site icon Kannada News-suddikshana

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲುಗಿನ ಸ್ಟಾರ್ ನಟ ಜೂ. ಎನ್‌ಟಿಆರ್ ಹಾಗೂ ನಟ ರಿಷಬ್ ಶೆಟ್ಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ತೆಲುಗಿನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಅವರು ಶ್ರಾವಣ ಮಾಸದ ಶನಿವಾರ ಭೇಟಿ ನೀಡಿದ್ದು, ಇವರಿಗೆ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ ಅವರು ಸಾತ್ ನೀಡಿದ್ದಾರೆ.

ಜೂನಿಯರ್ ಎನ್‌ಟಿಆರ್ ಅವರು ತಮ್ಮ ತಾಯಿ ಶಾಲಿನಿ ನಂದಾಮುರಿ ಅವರೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಬಂದು ದೇವರ ದರ್ಶನ ಪಡೆದರು. ಇನ್ನು ಜೂನಿಯರ್ ಎನ್‌ಟಿಆರ್ ಅವರೊಂದಿಗೆ ನಟ ರಿಷಬ್ ಶೆಟ್ಟಿ ಹಾಗೂ ಸೆಲೆಬ್ರಿಟಿ ನಿರ್ದೇಶಕ ಪ್ರಶಾಂತ್ ನೀಲ್ ಅವರು ಕೃಷ್ಣ, ಮುಖ್ಯಪ್ರಾಣ, ಗರುಡ ದೇವರ ದರ್ಶನ ಪಡೆದರು.

Exit mobile version