Home ದಾವಣಗೆರೆ ಉಜ್ವಲ ಗ್ರಾಹಕರಿಗೆ ಬಿಗ್ ಶಾಕ್: ಸಬ್ಸಿಡಿ ಸಿಲಿಂಡರ್ ಸಂಖ್ಯೆ 9 ರಿಂದ 4 ಕ್ಕೆ ಕಡಿತಗೊಳಿಸಿದ ಕೇಂದ್ರ!
ದಾವಣಗೆರೆನವದೆಹಲಿಬೆಂಗಳೂರುವಾಣಿಜ್ಯ

ಉಜ್ವಲ ಗ್ರಾಹಕರಿಗೆ ಬಿಗ್ ಶಾಕ್: ಸಬ್ಸಿಡಿ ಸಿಲಿಂಡರ್ ಸಂಖ್ಯೆ 9 ರಿಂದ 4 ಕ್ಕೆ ಕಡಿತಗೊಳಿಸಿದ ಕೇಂದ್ರ!

Share
ಸಿಲಿಂಡರ್
Share

ನವದೆಹಲಿ: ದೇಶದಲ್ಲಿ ಸಾರ್ವಜನಿಕರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯ ಬಿಸಿ ತಟ್ಟಿದ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪ್ರಧಾನ್ ಮಂತ್ರಿ ಉಜ್ವಲ ಯೋಜನೆ (PMUY) ಗ್ರಾಹಕರಿಗೆ ಮತ್ತೊಂದು ದೊಡ್ಡ ಆಘಾತ ನೀಡಿದೆ. ಉಜ್ವಲ ಯೋಜನೆಯಡಿ ನೀಡಲಾಗುತ್ತಿದ್ದ ₹300 ಸಬ್ಸಿಡಿಯನ್ನು ಇನ್ಮುಂದೆ ವರ್ಷಕ್ಕೆ ಕೇವಲ ಮೊದಲ 4 ಸಿಲಿಂಡರ್‌ ರೀಫಿಲ್‌ಗಳಿಗೆ ಮಾತ್ರ ಸೀಮಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಪರಿಷ್ಕರಿಸಿದೆ.

ಇದಕ್ಕೂ ಮುನ್ನ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವರ್ಷಕ್ಕೆ ಗರಿಷ್ಠ 9 ಸಿಲಿಂಡರ್‌ಗಳವರೆಗೆ ತಲಾ ₹300 ಸಬ್ಸಿಡಿ ಸಿಗುತ್ತಿತ್ತು. ಆದರೆ ಈಗ ಇದನ್ನು 4 ಸಿಲಿಂಡರ್‌ಗಳಿಗೆ ಕಡಿತಗೊಳಿಸಿರುವುದರಿಂದ, ಒಂದು ಕುಟುಂಬಕ್ಕೆ ವರ್ಷಕ್ಕೆ ಸಿಗುವ ಗರಿಷ್ಠ ಸಬ್ಸಿಡಿ ನೆರವು ₹1,200 ಕ್ಕೆ ನಿಗದಿಯಾದಂತಾಗಿದೆ.

ಕೇಂದ್ರ ಸರ್ಕಾರದ ಸಮರ್ಥನೆ ಏನು?

ಸಾಮಾನ್ಯ ಉಜ್ವಲ ಕುಟುಂಬವೊಂದು ವರ್ಷಕ್ಕೆ ಸರಾಸರಿ 4 ಸಿಲಿಂಡರ್‌ಗಳನ್ನು ಮಾತ್ರ ಬಳಸುತ್ತದೆ. ಹಾಗಾಗಿ ನೈಜ ಬಳಕೆಯ ಆಧಾರದ ಮೇಲೆ ಸಬ್ಸಿಡಿ ವ್ಯವಸ್ಥೆಯನ್ನು ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಲೆ ಏರಿಕೆಯ ಬಿಸಿ:

ಕಳೆದ ಜೂನ್ 7 ರಂದು ತೈಲ ಕಂಪನಿಗಳು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹29 ಹೆಚ್ಚಳ ಮಾಡಿದ್ದವು. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ಬೆಲೆ ಏರಿಕೆ ಇದಾಗಿದೆ (ಮಾರ್ಚ್ 7 ರಂದು ₹60 ಹೆಚ್ಚಿಸಲಾಗಿತ್ತು). ಪ್ರಸ್ತುತ ದೆಹಲಿಯಲ್ಲಿ ಸಾಮಾನ್ಯ ಗ್ರಾಹಕರಿಗೆ ಸಿಲಿಂಡರ್ ಬೆಲೆ ₹942 ಆಗಿದ್ದರೆ, ಉಜ್ವಲ ಗ್ರಾಹಕರಿಗೆ ₹300 ನೇರ ನಗದು ವರ್ಗಾವಣೆ (DBT) ಸಬ್ಸಿಡಿ ಕಳೆದು ₹642 ಕ್ಕೆ ಸಿಲಿಂಡರ್ ಸಿಗಲಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆ ಬಿಕ್ಕಟ್ಟು:

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಜಾಗತಿಕ ಸಂಘರ್ಷಗಳ ಕಾರಣದಿಂದಾಗಿ ಕಚ್ಚಾ ತೈಲ ಹಾಗೂ ಅಂತರರಾಷ್ಟ್ರೀಯ ಎಲ್‌ಪಿಜಿ ಬೆಲೆ ಶೇ. 46 ರಷ್ಟು ಜಿಗಿತ ಕಂಡಿದೆ. ಪ್ರಸ್ತುತ ಭಾರತದಲ್ಲಿ ಒಂದು ಸಿಲಿಂಡರ್ ಪೂರೈಕೆ ಮಾಡಲು ತಗಲುವ ನೈಜ ವೆಚ್ಚ ₹1,600 ದಾಟಿದೆ. ಇದರಿಂದಾಗಿ ತೈಲ ಕಂಪನಿಗಳು ಪ್ರತಿ ಸಿಲಿಂಡರ್ ಮೇಲೆ ₹700 ರಷ್ಟು ನಷ್ಟ (Under-recovery) ಅನುಭವಿಸುತ್ತಿವೆ. ಈ ಆರ್ಥಿಕ ಹೊರೆಯನ್ನು ಸರಿದೂಗಿಸಲು ಮತ್ತು ಸಬ್ಸಿಡಿ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ. ಆದಾಗ್ಯೂ, ದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.