ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ವೃತ್ತಿ ರಂಗನಾಟಕಕ್ಕೆ ಡಾ. ಪಿ. ವೀಣಾರ “ಜೀವದಾಯಿ” ಆಯ್ಕೆ

On: July 31, 2025 9:48 PM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/ DATE:31_07_2025

ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣವು ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ವೃತ್ತಿ ರಂಗನಾಟಕ ರಚನೆಗೆ ಆಹ್ವಾನಿಸಿತ್ತು. ಆಹ್ವಾನಿತ ನಾಟಕಗಳಲ್ಲಿ ಡಾ. ವೀಣಾ ಪಿ. ಅವರ “ಜೀವದಾಯಿ” ನಾಟಕವು ಆಯ್ಕೆಯಾಗಿದೆ.

ಈ ಸುದ್ದಿಯನ್ನೂ ಓದಿ: ಪಕ್ಷ ನಿಷ್ಠೆ, ಶ್ರಮಕ್ಕೆ ಪ್ರತಿಫಲ: ರಾಷ್ಟ್ರಮಟ್ಟದಲ್ಲಿ ಜನಮನ್ನಣೆ ಪಡೆದ “ಯುವನಾಯಕ”ನಿಗೆ ಪ್ರಮುಖ ಹುದ್ದೆ ಜವಾಬ್ದಾರಿ

2025ರ ಫೆಬ್ರವರಿ ತಿಂಗಳಲ್ಲಿ ವೃತ್ತಿ ರಂಗನಾಟಕ ರಚನಾ ತರಬೇತಿ ಶಿಬಿರ ಏರ್ಪಡಿಸಿತ್ತು. ಒಂದು ವಾರ ಕಾಲ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಬೆಟ್ಟದ ಪರಿಸರದಲ್ಲಿ ಯಶಸ್ವಿಯಾಗಿ ಶಿಬಿರ ಜರುಗಿತ್ತು.

ಈ ಸುದ್ದಿಯನ್ನೂ ಓದಿ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಗಾಯತ್ರಿ ಸಿದ್ದೇಶ್ವರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ವೃತ್ತಿ ರಂಗನಾಟಕವೊಂದನ್ನು ರಚಿಸಲು ಆಹ್ವಾನಿಸಲಾಗಿತ್ತು. ತೀರ್ಪುಗಾರರ ತೀರ್ಪಿನ ಮೇರೆಗೆ ಆಯ್ಕೆಯಾದ ಈ ನಾಟಕವನ್ನು ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ಪ್ರಕಟಿಸಲಾಗುವುದು ಎಂದು ದಾವಣಗೆರೆ ರಂಗಾಯಣ ವೃತ್ತಿ ರಂಗಭೂಮಿ ವಿಶೇಷಾಧಿಕಾರಿ ರವಿಚಂದ್ರ ಹಾಗೂ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment