SUDDIKSHANA KANNADA NEWS/ DAVANAGERE/DATE:02_09_2025
ದಾವಣಗೆರೆ: ದಾವಣಗೆರೆ ನಗರದ ವಿನೋಬ ನಗರದಲ್ಲಿ ಪ್ರತಿಷ್ಟಾಪಿಸಿರುವ ವರಸಿದ್ದಿ ವಿನಾಯಕ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸೆಪ್ಟೆಂಬರ್ 4 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಅಂದು ಬೆಳಿಗ್ಗೆ 11 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
READ ALSO THIS STORY: ಶಾಮನೂರು ಮನೆತನದವರ ಮನೆ ಬಾಗಿಲು ಕಾಯುವ “ಪೊಮೆರೇನಿಯನ್ ನಾಯಿ” ದಾವಣಗೆರೆ ಎಸ್ಪಿ: ಶಾಸಕ ಬಿ. ಪಿ. ಹರೀಶ್ ಕೆಂಡಾಮಂಡಲ!
ಹರಿಹರದಿಂದ ದಾವಣಗೆರೆಗೆ ಹಳೆ ಪಿಬಿ ರಸ್ತೆಯ ಮೂಲಕ ಬರುವ ಎಲ್ಲಾ ಭಾರಿ ವಾಹನ, ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮುಖಾಂತರ ಹೊಸ ಎನ್ಹೆಚ್-48 ರಸ್ತೆಯಿಂದ ಹಾಗೂ ಚಿತ್ರದುರ್ಗ ಕಡೆಯಿಂದ ಬರುವ ಎಲ್ಲಾ ವಾಹನಗಳು ಸಹ ಆವರಗೆರೆ ಹತ್ತಿರದ ಬಾಡಾಕ್ರಾಸ್ ಮುಖಾಂತರ ಬಂದು ಸರಕು ಲಾರಿಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೇಟ್ ಕ್ರಾಸ್ನಿಂದ ಎಪಿಎಂಸಿಗೆ ಹೋಗುವುದು. ಕೆಎಸ್ಆರ್ಟಿಸಿ ಬಸ್ಗಳು ಅದೇ ಮಾರ್ಗವಾಗಿ ಬಾಡಾಕ್ರಾಸ್ ಮುಖಾಂತರ ಆವರಗೆರೆ ಕಡಿಯಿಂದ ನೂತನ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ಬೆಂಗಳೂರು ಬೆಳಗಾವಿ ಕಡೆಗೆ ಹೋಗುವುದು. ಬಸ್ಗಳು ಖಾಸಗಿ ಬಸ್ಗಳು ಸಹ ಅದೇ ಆರ್ಗವಾಗಿ ಬಂದು ಎಂ.ಜಿ ಸರ್ಕಲ್ ಮುಖೇನ ನೂತನ ಖಾಸಗಿ ನಿಲ್ದಾಣಕ್ಕೆ ಬಂದು ಅದೇ ಮಾರ್ಗದಲ್ಲಿ ನಿರ್ಗಮಿಸಲು ಸೂಚಿಸಿದೆ.
ಜಿಎಂಐಟಿ ಕಾಲೇಜ್ ಹತ್ತಿರ ತಾತ್ಕಾಲಿಕ ರಸ್ತೆಯ ಬದಿಯಲ್ಲಿ ನಿಲ್ಲಿಸುವಂತಹ ಗೂಡ್ಸ್ ಲಾರಿಗಳನ್ನು ಹಳೇ ಪಿಬಿ ರಸ್ತೆಯ ಎರಡೂ ಬದಿಗಳಲ್ಲಿ ನಿಲ್ಲಿಸದೇ ದೂರದಲ್ಲಿ ಖಾಸಗಿ ಪಾರ್ಕಿಂಗ್ ವ್ಯವಸ್ಥೆ ಮಾಡಕೊಳ್ಳಬೇಕು. ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆಗೊಳ್ಳುವ ಬಸ್ಗಳು ಎಸಿ ಕಚೇರಿ ವೃತ್ತದಿಂದ ಅರುಣ ಸರ್ಕಲ್ ಮುಖಾಂತರ ಹರಿಹರದ ಕಡೆಗೆ ಹಳೇ ಪಿಬಿ ರಸ್ತೆಗೆ ಬಾರದೇ ಗಾಂಧಿ ವೃತ್ತದ ಮೂಲಕ ಹದಡಿ ರಸ್ತೆ ಯಿಂದ ಕಾರ್ಯಚರಣೆಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.