SUDDIKSHANA KANNADA NEWS/ DAVANAGERE/ DATE:16-11-2024
ದಾವಣಗೆರೆ: ದಾವಣಗೆರೆ ನಗರದ ಪಿಜೆ ಬಡಾವಣೆಯ ಶ್ರೀರಾಮ ದೇವಸ್ಥಾನದ ಮುಂಭಾಗ ಶನಿವಾರ ಸಂಜೆ 6 ಗಂಟೆಗೆ ನಾಗರಿಕರ ಹಿತರಕ್ಷಣ ಸಮಿತಿ ವತಿಯಿಂದ ಪಿಜೆ ಬಡಾವಣೆಯ ವಕ್ಫ್ ಆಸ್ತಿಯ ವಿವಾದ ಹಾಗೂ ಪಿಜೆ ಬಡಾವಣೆಯ ಕುಂದು ಕೊರತೆ ಸಭೆ ಕರೆಯಲಾಗಿದೆ.
ಈ ಸಭೆಯ ಉದ್ಘಾಟನೆಯನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಕೆ ಚಮನ್ ಸಾಬ್ ಉದ್ಘಾಟಿಸಲಿದ್ದಾರೆ. ಈ ಸಭೆಯಲ್ಲಿ ಉಪ ಮಹಾಪೌರರಾದ ಸೋಗಿ ಶಾಂತ್ ಕುಮಾರ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ದಾವಣಗೆರೆ ತಾಲೂಕು ತಹಶೀಲ್ದಾರ್ ಡಾ. ಅಶ್ವಥ್ ಎಂ. ಬಿ., ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಲಕ್ಷ್ಮಿ ಎಸ್. ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದ ಅಧ್ಯಕ್ಷತೆಯನ್ನು ವಾರ್ಡ್ ಅಧ್ಯಕ್ಷ ಮಧು ಪವಾರ್ ವಹಿಸಿಕೊಳ್ಳಲಿದ್ದಾರೆ. ಪಿಜೆ ಬಡಾವಣೆಯ ನಾಗರಿಕರು ಆಗಮಿಸಿ ಸಭೆಯಲ್ಲಿ ಅಹವಾಲು, ವಕ್ಫ್ ಕುರಿತ ಗೊಂದಲಕ್ಕೆ ಉತ್ತರ ಪಡೆಯಬಹುದು ಎಂದು ಸಂಘಟಕರು ತಿಳಿಸಿದ್ದಾರೆ.