SUDDIKSHANA KANNADA NEWS/ DAVANAGERE/ DATE:14-01-2025
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರನ್ನು ಕೋಚಿ ಮಠದ ಶ್ರೀಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹಾಸನದ ಸುಪ್ರಸಿದ್ದ ಕೋಡಿಮಠದ ಪೀಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಅವರನ್ನು ಭೇಟಿ ಮಾಡಿ, ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಅವರ ಪುತ್ರಿಯರಾದ ಮಂಜುಳಾ ಶಿವಶಂಕರ್,ಶೈಲಜಾ ಭಟ್ಟಾಚಾರ್ಯ, ಸುಧಾ ರಾಜೇಂದ್ರ ಪಾಟೀಲ್, ಮೀನಾ ಪಾಟೀಲ್, ಎಸ್. ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು, ಪುತ್ರಿ ಹಾಗೂ ಮತ್ತೊಬ್ಬ ಪುತ್ರ ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು. ಈ ವೇಳೆ ಕೋಡಿ ಮಠದ ಶ್ರೀಗಳು ಆದಷ್ಟು ಬೇಗ ಹುಷಾರಾಗಿ ಎಂದು ಹಾರೈಸಿದರು. ನೂರ್ಕಾಲ ಬಾಳುವಂತಾಗಲಿ ಎಂದು ಹರಿಸಿದರು.
ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ನನ್ನನ್ನು ಭೇಟಿ ಮಾಡಿದ್ದು ಖುಷಿ ತಂದಿದೆ. ಶ್ರೀಗಳ ಆಶೀರ್ವಾದವು ಹೆಚ್ಚಿರಲಿ. ನಿಮ್ಮೆಲ್ಲರ ಹಾರೈಕೆಯಿಂದ ಚೆನ್ನಾಗಿರುವೆ ಎಂದು ಶಾಮನೂರು ಶಿವಶಂಕರಪ್ಪ ಅವರು
ಹೇಳಿದರು.