ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಯುಗಾದಿ ನಂತರ ಏನಾಗುತ್ತದೆ, ಧಾರ್ಮಿಕ ಮುಖಂಡರ ಸಾವಿನ ಬಗ್ಗೆ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯದಲ್ಲೇನಿದೆ…?

On: February 19, 2024 8:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-02-2024

ಕೋಲಾರ: ಕೋಡಿ ಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗುತ್ತದೆ ಎಂಬ ನಂಬಿಕೆ ಈಗಲೂ ಜನರಲ್ಲಿದೆ. ಹಾಗಾಗಿ, ಕೋಡಿ ಶ್ರೀಗಳ ಭವಿಷ್ಯವಾಣಿ ಬಗ್ಗೆ ಕುತೂಹಲ ಗರಿಗೆದರಿತ್ತದೆ. ಹೆಚ್ಚು ಕಡಿಮೆ ಈ ಶ್ರೀಗಳು ಹೇಳಿದ್ದು ನಿಜವಾಗಿದೆ.

ಆಗಾಗ್ಗೆ ಭವಿಷ್ಯವಾಣಿ ನುಡಿಯುವ ಶ್ರೀಗಳು, ಈಗ ಮತ್ತೊಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಯುಗಾದಿ ನಂತರ ಒಳ್ಳೆಯದಾಗುತ್ತದೆ ಎಂಬ ಸೂಚನೆ ಕೊಟ್ಟಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಬರಗಾಲದಿಂದ ಬೇಸತ್ತಿರುವ ಜನರು, ರೈತರಿಗೆ ಯುಗಾದಿ ನಂತರ ಆಶಾದಾಯಕ ದಿನಗಳು ಬರಲಿವೆ. ಒಳ್ಳೆಯ ಮಳೆ, ಬೆಳೆ ಮತ್ತು ವರುಣ ಸುರಿಯುವ ಲಕ್ಷಣಗಳಿವೆ ಎಂದು ಭವಿಷ್ಯ ಹೇಳಿದ್ದಾರೆ.

ಮತ್ತೊಂದು ಆಘಾತಕಾರಿ ಸುಳಿವನ್ನೂ ಸಹ ನೀಡಿದ್ದಾರೆ. ಖ್ಯಾತ ಧಾರ್ಮಿಕ ಮುಖಂಡನ ಸಾವು, ಮತಾಂಧತೆ ಹೆಚ್ಚಳ, ಬಾಂಬ್ ಸ್ಫೋಟ, ಭೂಕಂಪವೂ ಹೆಚ್ಚಾಗುತ್ತದೆ. ಇದರಿಂದ ಸಾವು ನೋವು ಸಂಭವಿಸುತ್ತದೆ ಎಂದೂ ನುಡಿದಿದ್ದಾರೆ.

ರಾಜಕೀಯ, ದುಡಿಮೆ, ವ್ಯಾಪಾರ, ಮಳೆ, ಬೆಳೆ ಸೇರಿದಂತೆ ಎಲ್ಲಾ ವಿಚಾರಗಳೂ ಯುಗಾದಿ ನಂತರದ ಒಂದು ತಿಂಗಳು ಕಳೆದ ಮೇಲೆ ಗೊತ್ತಾಗುತ್ತದೆ. ಕಾಯುತ್ತಿರಿ ಎಂದಿದ್ದಾರೆ.

ರಾಜ್ಯದಲ್ಲಿ 5 ಗ್ಯಾರಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಈ ಯೋಜನೆಗಳ ಮೇಲೆ ನಂಬಿಕೆ ಹೆಚ್ಚು ಇಟ್ಟುಕೊಂಡಿದೆ. ಈ ಯೋಜನೆಗಳೇ ಲೋಕಸಭೆ ಚುನಾವಣೆಗೆ ಅನುಕೂಲ ಆಗಲಿವೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಈ ಬಗ್ಗೆ ನನಗಿಂತ ನಿಮಗೆ ಹೆಚ್ಚು ಗೊತ್ತು. ರಾಷ್ಟ್ರ ರಾಜಕಾರಣವೂ ಸಹ ಯುಗಾದಿ ನಂತರವೇ ಗೊತ್ತಾಗಲಿದೆ. ಗ್ಯಾರೆಂಟ್ ಗಳಿಂದ‌ ಸರ್ಕಾರ ನಡೆಯುತ್ತಿದ್ದೀಯಾ.? ಎಂಬ ಪ್ರಶ್ನೆಗೆ ಕೋಡಿ ಮಠದ ಶ್ರೀಗಳು ಈ ರೀತಿ ಪ್ರತಿಕ್ರಿಯೆ ನೀಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment