ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಏನಿದು…? ಸ್ಪೆಷಾಲಿಟಿ ಏನು…? ಹೇಗೆ ಕಾರ್ಯನಿರ್ವಹಿಸುತ್ತದೆ…?

On: January 31, 2024 10:33 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31-01-2024

ಬೆಂಗಳೂರು: జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಪ್ಲಿಕೇಶನ್ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಹಾಗೂ ಸರಿಯಾದ ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಮತ್ತು ನಿಧಿಯ ಪರಿಣಾಮಕಾರಿ ಬಳಕೆಗೆ ಸಹಾಯ ಮಾಡುತ್ತದೆ.

ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಚಾಲನೆ ನೀಡುವ ವೇಳೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪಯ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರ ಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.

ವಿಶೇಷ ಯೋಜನೆಗಳ ಅಡಿಯಲ್ಲಿ ಅನೇಕ ಸಲಕರಣೆಗಳು ಮತ್ತು ಇತರ ಸೌಲಭ್ಯಗಳನ್ನು ಜಿಲ್ಲಾಡಳಿತವು ಒದಗಿಸಿದೆ. ಈ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಬಳಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕ್ಷೇತ್ರಮಟ್ಟದ ವಿಶ್ಲೇಷಣೆಗಳ ಅಗತ್ಯವಿದೆ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮಕ್ಷೇತ್ರಮಟ್ಟದಲ್ಲಿ ಭೇಟಿ ನೀಡುವ ಮಾಹಿತಿಯನ್ನು ಸಂಗ್ರಹಿಸಲು ತಂತ್ರಾಂಶದಲ್ಲಿ ಸರಳ ವಿಧಾನವನ್ನು ಅನುಸರಿಸಲಾಗಿದೆ.

ಎಲ್ಲಾಇಲಾಖೆಗಳ ಪರಿಣಾಮಕಾರಿ ಮೇಲ್ವಿಚಾರಣೆ ಮತ್ತು ತಪಾಸಣೆಗಳನ್ನು ಸುವ್ಯವಸ್ಥಿತಗೊಳಿಸಲು, ತಂತ್ರಾಂಶ ಹಸ್ತಕ್ಷೇಪದ ಅಗತ್ಯವನ್ನುಅನುಷ್ಠಾನ ಮಾಡುವುದೇ ಪ್ರಗತಿ ಮೊಬೈಲ್ ಅಪ್ಲಿಕೇಶನ್.

ಪ್ರಗತಿ ಅಪ್ಲಿಕೇಶನ್‌ ಅಭಿವೃದ್ಧಿ

1. ಅಧಿಕಾರಿಗಳಿಂದ ಕ್ಷೇತ್ರ ಭೇಟಿಗಳು ಕಡಿಮೆಯಾಗಿರುವುದು

2. ಹಿರಿಯ ಅಧಿಕಾರಿಗಳು ನಿಯೋಜಿಸಿದ ಕ್ಷೇತ್ರ ಭೇಟಿಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ತೊಂದರೆ.

3. ಅಂತರ ಇಲಾಖಾ ಕ್ಷೇತ್ರ ಭೇಟಿಗಳನ್ನು ನಿರ್ವಹಿಸುವಲ್ಲಿ ಮತ್ತು ಮೇಲ್ವಿಚಾರಣೆ ಮಾಡುವಲ್ಲಿ ತೊಂದರೆ.

4. ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಮತ್ತುಕ್ರೋಢೀಕರಿಸುವಲ್ಲಿ ಸಮಸ್ಯೆ.

ತಂತ್ರಾಂಶದ ವೈಶಿಷ್ಟ್ಯಗಳು

  • ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ದಿನ ನಿತ್ಯದ ತಪಾಸಣೆ ನಿಗದಿಪಡಿಸುವುದು.
  • ಅಂತರ ಇಲಾಖಾ ತಪಾಸಣೆಗಳನ್ನು ನಿಗದಿಪಡಿಸುವುದು
  • ಕೇಂದ್ರೀಕೃತ ವರದಿಗಳನ್ನು ತಯಾರಿಸಲು ಅನುಕೂಲವಾಗುವುದು.
  • ಜಿಪಿಎಸ್ ಗಳ ಮತ್ತು ಪ್ರಸ್ತುತ ಟೈಮ್ನೊಂದಿಗೆ ಫೋಟೋಗಳನ್ನು ಸೆರೆ ಹಿಡಿಯುವುದು

ತಂತ್ರಾಂಶದ ಬಳಕೆಯ ಪರಿಣಾಮ:

  • ನಿಯೋಜಿತ ವೇಳಾಪಟ್ಟಿಯ ಪ್ರಕಾರ ಅಧಿಕಾರಿಗಳು ನಿಯಮಿತವಾಗಿ ಸಂಸ್ಥೆಗಳಿಗೆ ಭೇಟಿ ನೀಡುತ್ತಾರೆ ಮತ್ತು ಸಮಸ್ಯೆಗಳನ್ನುತಿಳಿದುಕೊಂಡು ಅವುಗಳನ್ನು ಪರಿಹರಿಸುತ್ತಾರೆ.
  • ಹಿರಿಯ ಅಧಿಕಾರಿಗಳು ವಿವಿಧ ಸಂಸ್ಥೆಗಳಿಗೆಭೇಟಿ ನೀಡುವ ಅಧಿಕಾರಿಗಳ ಮೇಲೆ ನಿಗಾ ಇಡಬಹುದು ಮತ್ತು ಯಾವುದೇ ಸಮಸ್ಯೆಗಳಿದ್ದರೆ ಮಾಸಿಕ ಆಧಾರದಮೇಲೆ ಪರಿಶೀಲಿಸಬಹುದು.
  • ಕೇಂದ್ರ ಭಂಡಾರದ/ಕ್ರೋಢೀಕೃತಮಾಹಿತಿಆಧಾರದ ಮೇಲೆ ನಾವು ವಿವಿಧ ಎಂಐಎಸ್ವರದಿಗಳನ್ನುಸೃಜಿಸಬಹುದು, ಇದು ಅಗತ್ಯದ ಅಂತರಗಳನ್ನುರ‍್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.
  • ನಂತರಭವಿಷ್ಯದ ಯೋಜನೆ ಮತ್ತು ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.
  • ಭವಿಷ್ಯದ ಆವೃತ್ತಿಗಳಲ್ಲಿ ಸುಧಾರಣೆಗಳನ್ನು ಯೋಜಿಸಲಾಗಿದೆ:
  • ಜಿಲ್ಲಾ ವೆಬ್ಸೈಟ್(ಜಾಲತಾಣ)/ ಸಾರ್ವಜನಿಕ ಡೊಮೇನ್ನಲ್ಲಿ ತಪಾಸಣೆ ವಿವರಗಳ ಲಿಂಕ್ ಅನ್ನು ಒದಗಿಸುವುದು.
  • ಇ-ಸ್ಪಂದನ (ಸಾರ್ವಜನಿಕ ಕುಂದುಕೊರತೆ ಯೊಂದಿಗೆ ಲಿಂಕ್ ಮಾಡುವುದು, ಅಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಾಗುತ್ತದೆ, ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಾತ್ಕಾಲಿಕ ತಪಾಸಣೆಯಾಗಿ
    ನಿಯೋಜಿಸಬಹುದು.
  • ದಿನನಿತ್ಯದ ತಪಾಸಣೆ ಪ್ರಕ್ರಿಯೆಯನ್ನು ಸ್ವಯಂಚಾಲಿತಗೊಳಿಸುವುದು.
  • ನಿರ್ಧಾರ ತೆಗೆದುಕೊಳ್ಳಲು ಮತ್ತು ಯೋಜನೆಗಳಪರಿಣಾಮಕಾರಿ ಅನುಷ್ಠಾನಕ್ಕೆ ಸಹಾಯ ಮಾಡುವ ವಿವಿಧ ವಿಶ್ಲೇಷಣಾ ವರದಿಗಳನ್ನು ರಚಿಸಲು ಅನುವು ಮಾಡಿಕೊಡುವುದು
  • ಪ್ರಗತಿ ಮೊಬೈಲ್ ಅಪ್ಲಿಕೇಶನ್ ಖಂಡಿತವಾಗಿಯೂ ರಾಜ್ಯದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ
    ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.
  • ಅಪ್ಲಿಕೇಶನ್ ಅಗತ್ಯತೆಗಳನ್ನು ರ‍್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಸರಿಯಾದ ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಮತ್ತು ನಿಧಿಯ ಪರಿಣಾಮಕಾರಿ ಬಳಕೆಗೆ ಸಹಾಯ ಮಾಡುತ್ತದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment