ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕರ್ನಾಟಕ ನೂತನ “ಕೈ” ಸಾರಥಿ ಫಿಕ್ಸ್! ಖರ್ಗೆ ಕೊಟ್ಟ ಸ್ಫೋಟಕ ಸುಳಿವೇನು..?

On: February 13, 2025 2:27 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-02-2025

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಬದಲಾವಣೆ ಖಚಿತ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. ಈಗಾಗಲೇ ಕೆಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರ ನಿಯುಕ್ತಿಗೊಳಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡು ರಾಜ್ಯಗಳ ಅಧ್ಯಕ್ಷರೂ ಬದಲಾಗಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. ಇದು ಕರ್ನಾಟಕದಲ್ಲಿಯೂ ಆಗುತ್ತದೆಯಾ ಎಂಬ ಚರ್ಚೆ ಶುರುವಾಗಿದೆ.

ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಡಿಸಿಎಂ ಕೂಡ ಹೌದು. ಎರಡು ಹುದ್ದೆಗಳಲ್ಲಿ ಅಧಿಕಾರ ಅನುಭವಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಬಣ ಕಣ್ಣು ಕೆಂಪಾಗಿಸಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಸತೀಶ್ ಜಾರಕಿಹೊಳಿ, ಕೆ. ಎನ್. ರಾಜಣ್ಣ, ಎಂ. ಬಿ. ಪಾಟೀಲ್, ಹೆಚ್. ಕೆ. ಪಾಟೀಲ್, ಡಿ. ಕೆ. ಸುರೇಶ್ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಸತೀಶ್ ಜಾರಕಿಹೊಳಿ ಇಲ್ಲವೇ ಎಂ. ಬಿ. ಪಾಟೀಲ್ ಅವರ ಪೈಕಿ ಒಬ್ಬರು ಕಾಂಗ್ರೆಸ್ ಸಾರಥಿಯಾಗುವುದು ಫಿಕ್ಸ್.

ಇನ್ನು ಡಿ. ಕೆ. ಶಿವಕುಮಾರ್ ಹೆಚ್ಚಿನ ಒಲವು ಇರುವುದು ಸಹೋದರ ಡಿ. ಕೆ. ಸುರೇಶ್ ಮೇಲೆ. ಲೋಕಸಭೆ ಚುನಾವಣೆಯಲ್ಲಿ ಸೋತಿರುವ ಕಾರಣ ಈ ಪಟ್ಟ ಸಿಗುವುದು ಅನುಮಾನ. ಸಿಎಂ ಸ್ಥಾನ ಪಡೆಯಲು ಹಗಲಿರುಳು ಶ್ರಮಿಸುತ್ತಿರುವ ಡಿ. ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಕುಂಭಮೇಳಕ್ಕೂ ಹೋಗಿ ಬಂದಿದ್ದಾರೆ. ದೇವಸ್ಥಾನಗಳಿಗೂ ಭೇಟಿ ಕೊಟ್ಟಿದ್ದಾರೆ. ತೆರೆಮರೆಯಲ್ಲಿ ತಂತ್ರಗಾರಿಕೆ ರೂಪಿಸಿದ್ದಾರೆ. ಇತ್ತ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಮುಂದುವರಿಸಲು ರಣತಂತ್ರ ಹೆಣೆಯಲಾಗಿದೆ. ಒಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರ ಬಣದ ಪಾಲಾಗುತ್ತೆ ಎಂಬುದರ ಮೇಲೆ ಸಿದ್ದರಾಮಯ್ಯರ ಸಿಎಂ ಪಟ್ಟ ಇರಲಿದೆ ಎಂದೂ ವಿಶ್ಲೇಷಿಸಲಾಗುತ್ತಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ರೂಪದರ್ಶಿ

ಶವವಾಗಿ ಪತ್ತೆಯಾದ ರೂಪದರ್ಶಿ “ಖುಷಿ” ದೇಹದ ಮೇಲೆ ಗಾಯಗಳು: ಬಂಧಿತ ಗೆಳೆಯ ಖಾಸಿನ್ ಅಹ್ಮದ್ ಸುತ್ತ ಅನುಮಾನದ ಹುತ್ತ!

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

ನರೇಂದ್ರ ಮೋದಿ

ಕೆಂಪು ಕೋಟೆ ಸ್ಫೋಟದ ಹಿಂದಿನ ಪಿತೂರಿಗಾರರ ಬಿಡಲ್ಲ: ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ!

Leave a Comment