ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಕ್ಕಿನೇನಿ ಸೊಸೆ ಶೋಭಿತಾ ಧೂಳಿಪಾಲ ಟಾರ್ಗೆಟ್ ಆಗಿರುವುದೇಕೆ…?

On: February 19, 2025 12:03 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-02-2025

ಅಕ್ಕಿನೇನಿ ಕುಟುಂಬದ ಸೊಸೆ ಶೋಭಿತಾ ಧೂಳಿಪಾಲ ಪದೇ ಪದೇ ಟಾರ್ಗೆಟ್ ಆಗುತ್ತಿದ್ದಾರೆ. ಶೋಭಿತಾ ಏನೇ ಮಾಡಿದರೂ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೆ ಗುರಿಯಾಗುತ್ತಿದ್ದಾರೆ. ನೆಟ್ಟಿಗರಿಂದ ಟೀಕೆಗೆ ಒಳಗಾಗುತ್ತಿದ್ದಾರೆ.

ನಟ ನಾಗಚೈತನ್ಯಗೆ ಸಮಂತಾ ಡಿವೋರ್ಸ್ ಕೊಟ್ಟ ಬಳಿಕ ಸಮಂತಾ ಪರ ಟ್ವೀಟ್ ಮಾಡುತ್ತಿದ್ದರೆ, ಶೋಭಿತಾ ಕಾಲೆಳೆಯುತ್ತಲೇ ಇದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಕ್ಕಿನೇನಿ ಕುಟುಂಬ ಕುಟುಂ ಭೇಟಿ ಮಾಡಿತ್ತು. ಆಗಲೂ ನಾಗಚೈತನ್ಯ ಪಕ್ಕದಲ್ಲಿ ಸಮಂತಾ ಇದ್ದರೆ ಚೆನ್ನಾಗಿತ್ತು, ಶೋಭಿತಾ ಚೆನ್ನಾಗಿ ಕಾಣುತ್ತಿಲ್ಲ ಎಂಬ ಟೀಕೆಗಳು ಕೇಳಿ ಬರುತ್ತಿವೆ. ನಾಗಚೈತನ್ಯ ಜೊತೆ ಮದುವೆಯಾಗಿ ಎರಡು ತಿಂಗಳಾದರೂ ನೆಟ್ಟಿಗರ ಕಾಟ ತಪ್ಪಿಲ್ಲ.

ಶೋಭಿತಾ ಬಾಲಿವುಡ್‌ನಲ್ಲಿ ಸಮಂತಾಗಿಂತ ಹೆಚ್ಚು ಪ್ರಸಿದ್ಧರು. ಅಷ್ಟೇ ಅಲ್ಲ ಅವರು ಅತ್ಯಂತ ಸ್ಟೈಲಿಶ್ ನಟಿಯರಲ್ಲಿ ಒಬ್ಬರು. ಆದರೂ ಸೌತ್ ಸಿನಿ ಪ್ರೇಮಿಗಳಿಗೆ ಸಮಂತಾನೆ ಇಷ್ಟ. ಇತ್ತೀಚೆಗೆ ಶೋಭಿತಾ ಮತ್ತೊಮ್ಮೆ ನೆಟಿಜನ್‌ಗಳ ಕೆಂಗಣ್ಣಿಗೆ
ಗುರಿಯಾಗಿದ್ದಾರೆ. ಇತ್ತೀಚೆಗೆ, ಅಕ್ಕಿನೇನಿ ಕುಟುಂಬವು ಪ್ರಧಾನಿ ನರೇಂದ್ರ ಮೋದಿಯವರನ್ನು ಸಂಸತ್ ಭವನದಲ್ಲಿ ಭೇಟಿಯಾಯಿತು. ಈ ಸಂದರ್ಭದಲ್ಲಿ ಶೋಭಿತಾ ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಾ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ನರೇಂದ್ರ ಮೋದಿ ಅವರಿಗೆ ಕೊಂಡಪಲ್ಲಿ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಲಾಯಿತು. ಶೋಭಿತಾ ಅವರು ಬಾಲ್ಯದಲ್ಲಿ ಆಂಧ್ರ ಪ್ರದೇಶದ ತೆನಾಲಿಯಲ್ಲಿರುವ ತನ್ನ ಅಜ್ಜಿ ಮನೆಯಲ್ಲಿ ಬೆಳೆದು ಕೊಂಡಪಲ್ಲಿ ಗೊಂಬೆಗಳೊಂದಿಗೆ ಆಟವಾಡುತ್ತಿದ್ದೆ ಎಂದು ಹೇಳಿದರು. ಇದಕ್ಕಾಗಿ ನೆಟ್ಟಿಗರು ಅವರನ್ನು ಗುರಿಯಾಗಿಸಿಕೊಳ್ಳಲು ಪ್ರಾರಂಭಿಸಿದರು.

ಮತ್ತೊಂದೆಡೆ ನಾಗ ಚೈತನ್ಯ ಅವರ ಥಂಡೇಲ್ ಚಿತ್ರ ಬಿಡುಗಡೆಯಾಗಿದೆ. ಚಿತ್ರದ ಗೆಲುವಿಗೆ ಶೋಭಿತಾ ಕಾಲ್ಗುಣ ಎಂದರೆ ಮತ್ತೆ ಕೆಲವರಂತೂ ಸಾಯಿಪಲ್ಲವಿಯಿಂದಲಾ ಚಿತ್ರ ಸಕ್ಸಸ್ ಆಗಿದೆ ಎಂದು ಹೇಳಿದ್ದಾರೆ. ಯಾರು ಏನೇ ಹೇಳಿದರೂ ಸಮಂತಾ ಅವರೇ ರಾಣಿ. “ಪ್ರಧಾನಿ ಮೋದಿ ಸಮಂತಾ ಎಲ್ಲಿ ಎಂದು ಕೇಳಲಿಲ್ಲವೇ?” “ನಿಮ್ಮ ಪಕ್ಕದಲ್ಲಿ ಸೋಭಿತಾ ಚೆನ್ನಾಗಿಲ್ಲ. ಸಮಂತಾ ಮಾತ್ರ ಸೂಪರ್ ಜೋಡಿ” ಎಂದು ಮತ್ತೊಬ್ಬ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಶೋಭಿತಾ ಪ್ರತಿದಿನ ಈ ಟ್ರೋಲ್‌ಗಳಿಂದ ಬೇಸತ್ತಿದ್ದಾರೆ. ಬಾಲಿವುಡ್ ನಿಂದ ಬಂದಿರುವ ಅವರು ಈಗಷ್ಟೇ ಅಕ್ಕಿನೇನಿ ಕುಟುಂಬದಲ್ಲಿ ಅಡ್ಜಸ್ಟ್ ಆಗುತ್ತಿದ್ದಾರೆ. ಶೋಭಿತಾ ಏನೇ ಪೋಸ್ಟ್ ಮಾಡಿದರೂ ಟ್ರೋಲ್ ಆಗುತ್ತಿದೆ. ಇದು ಅವರಿಗೆ ಇರಿಸು
ಮುರಿಸು ತರುತ್ತಿದ್ದರೂ ಮುಂದೆ ಹೋಗುತ್ತಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ರೂಪದರ್ಶಿ

ಶವವಾಗಿ ಪತ್ತೆಯಾದ ರೂಪದರ್ಶಿ “ಖುಷಿ” ದೇಹದ ಮೇಲೆ ಗಾಯಗಳು: ಬಂಧಿತ ಗೆಳೆಯ ಖಾಸಿನ್ ಅಹ್ಮದ್ ಸುತ್ತ ಅನುಮಾನದ ಹುತ್ತ!

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

ನರೇಂದ್ರ ಮೋದಿ

ಕೆಂಪು ಕೋಟೆ ಸ್ಫೋಟದ ಹಿಂದಿನ ಪಿತೂರಿಗಾರರ ಬಿಡಲ್ಲ: ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ!

Leave a Comment