• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

BIG EXCLUSIVE: ಸಿರಿಗೆರೆ ಮಠದ ವಿರುದ್ಧ ಸುಳ್ಳು ಆರೋಪ, ಪಿತೂರಿ ನಡೆಸುವವರ ವಿರುದ್ಧ ತೊಡೆತಟ್ಟಿದ ಭಕ್ತರು…! ರಕ್ತದಲ್ಲಿ ಸಹಿ ಸಂಗ್ರಹಿಸಿದ್ಯಾಕೆ…?

Editor by Editor
August 20, 2024
in ದಾವಣಗೆರೆ, ಬೆಂಗಳೂರು
0
BIG EXCLUSIVE: ಸಿರಿಗೆರೆ ಮಠದ ವಿರುದ್ಧ ಸುಳ್ಳು ಆರೋಪ, ಪಿತೂರಿ ನಡೆಸುವವರ ವಿರುದ್ಧ ತೊಡೆತಟ್ಟಿದ ಭಕ್ತರು…! ರಕ್ತದಲ್ಲಿ ಸಹಿ ಸಂಗ್ರಹಿಸಿದ್ಯಾಕೆ…?

SUDDIKSHANA KANNADA NEWS/ DAVANAGERE/ DATE:20-08-2024

ದಾವಣಗೆರೆ: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ತರಳಬಾಳು ಬೃಹನ್ಮಠದ ವಿರುದ್ಧ ಸುಳ್ಳು ಆರೋಪ, ವದಂತಿ ಹಬ್ಬಿಸುವವರು ಹಾಗೂ ಆರೋಪ ಮಾಡುವ ಬಂಡವಾಳಶಾಹಿಗಳ ವಿರುದ್ಧ ತಾಲೂಕಿನ ಹೆಮ್ಮನಬೇತೂರು ಗ್ರಾಮದ ಸದ್ಭಕ್ತರು ತೊಡೆತಟ್ಟಿದ್ದಾರೆ. ಮಾತ್ರವಲ್ಲ, ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರೇ ಪೀಠಾಧಿಪತಿಗಳಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿ ರಕ್ತದಲ್ಲಿ ಸಹಿ ಚಳವಳಿ ನಡೆಸುವ ಮೂಲಕ ಮಠದ ವಿರೋಧಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ಹೆಮ್ಮನಬೇತೂರು ಗ್ರಾಮದ ಮಠದ ಸದ್ಭಕ್ತರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರೇ ಪೀಠದಲ್ಲಿ ಮುಂದುವರಿಯಬೇಕೆಂದು ಒಮ್ಮತದಿಂದ ನಿರ್ಣಯ ತೆಗೆದುಕೊಂಡು ರಕ್ತದಲ್ಲಿ ಸಹಿ ಮಾಡುವ ಮೂಲಕ ಮಠಕ್ಕೆ ಪತ್ರ ಕಳುಹಿಸಿಕೊಟ್ಟಿದ್ದಾರೆ.

ಯಾರ ಒತ್ತಡಕ್ಕೂ ಮಣಿಯದೇ ಸ್ವಯಂಪ್ರೇರಿತರಾಗಿ ನಾವೆಲ್ಲರೂ ಸಭೆ ನಡೆಸಿ ನಿರ್ಧಾರಕ್ಕೆ ಬಂದಿದ್ದೇವೆ. ಶ್ರೀಗಳ ವಿರುದ್ಧ ನಡೆಸುತ್ತಿರುವ ಪಿತೂರಿ ವಿರುದ್ದ ಹೋರಾಟಕ್ಕೆ ಸಿದ್ಧರಿದ್ದೇವೆ. ಸಮಾಜದಲ್ಲಿ ವಿನಾಕಾರಣ ಸುಳ್ಳು ಹೇಳುತ್ತಾ ಮಠದ ಹೆಸರು ಕೆಡಿಸಲು ಯತ್ನಿಸುತ್ತಿರುವವರು ಸುಮ್ಮನಿದ್ದರೆ ಒಳಿತು. ಇಲ್ಲದಿದ್ದರೆ ನಾವೂ ತಿರುಗೇಟು ನೀಡುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಇಂದು ಹಳ್ಳಿ ಹಳ್ಳಿಗಳಲ್ಲಿ ಎಲ್ಲಾ ಜನಸಾಮಾನ್ಯರು, ಪ್ರಜ್ಞಾವಂತ ಭಕ್ತರು ಪೂಜ್ಯರ ಮುಂದಾಳತ್ವದಲ್ಲಿ ಬಲಿಷ್ಠ ಸಮ ಸಮಾಜದ ಬೇಡಿಕೆಯನ್ನು ಇಟ್ಟು, ಯಾವ ಅಪಪ್ರಚಾರಕ್ಕೆ ಬಗ್ಗದೇ ಪರಮಪೂಜ್ಯರು ಆಶೀರ್ವಾದಪೂರ್ವಕ ಮಾರ್ಗದರ್ಶನ ನೀಡುತ್ತಿದ್ದಾರೆ. ಇದರ ವಿರುದ್ಧ ಪಿತೂರಿ ನಡೆಸುವವರ ಬಗ್ಗೆ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ. ಇಷ್ಟು ದಿನ ಇಲ್ಲದ ಗೊಂದಲ, ಸುಳ್ಳು ಆರೋಪ, ಪಿತೂರಿ ಈಗ ಹೆಚ್ಚಾಗಿ ನಡೆಯುತ್ತಿದೆ. ನಾವೆಲ್ಲರೂ ಶ್ರೀಗಳ ಪರ ನಿಲ್ಲುವ ಮೂಲಕ ಸರಿಯಾದ ಉತ್ತರ ನೀಡೋಣ ಎಂದು ಗ್ರಾಮಸ್ಥರು ತಿಳಿಸಿದರು.

ಗ್ರಾಮದ ದೇವಾಲಯದಲ್ಲಿ ಗ್ರಾಮದ ಮುಖಂಡರು, ಭಕ್ತರೆಲ್ಲರೂ ಸೇರಿ ಶ್ರೀ ತರಳಬಾಳು ಬೃಹನ್ಮಠದ ಮೇಲೆ ಸುಳ್ಳು ಸುದ್ದಿ ಪಿತೂರಿ ಆರೋಪ ಮಾಡುವ ಬಂಡವಾಳಶಾಹಿಗಳ ವಿರುದ್ಧ ತೊಡೆ ತಟ್ಟಿ ನಿಲ್ಲೋಣ. ಜಗದ್ಗುರುಗಳವರ ದಿವ್ಯ ನೇತೃತ್ವದಲ್ಲಿ ಸಮಾಜ ಮುಂದುವರೆಯಲೆಂಬ ಆಶಯದೊಂದಿಗೆ ರಕ್ತದಲ್ಲಿ ಸಹಿ ಮಾಡಿ ನಿರ್ಣಯ ಕೈಗೊಂಡಿದ್ದೇವೆ. ಎಲ್ಲರೂ ಸಮ್ಮತಿಸಿ, ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನಿಜಕ್ಕೂ ಹೆಮ್ಮೆನ ತೂರಿನ ಪವಿತ್ರ ದೇವಾಲಯದ ನಿರ್ಣಯವು, ರೆಸಾರ್ಟ್ ಪಟಲಾಂನ ಬಂಡವಾಳ ಶಾಹಿಗಳ ವಿರುದ್ಧವಾಗಿರುತ್ತದೆ. ನಾವೆಲ್ಲರೂ ಮಠದ ನಿಷ್ಠಾವಂತ ಭಕ್ತರು. ಹೊಟೇಲ್, ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕೂ ದೇವಾಲಯದಲ್ಲಿ ನಡೆಯುವ ಸಭೆಗೂ ಎಷ್ಟು ವ್ಯತ್ಯಾಸ ಎಂಬುದು ಗೊತ್ತಾಗಲಿ ಎಂದು ತಿರುಗೇಟು ನೀಡಿದರು.

ಸಿರಿಗೆರೆ ಮಠವು ಬೇರೆ ಮಠಗಳಂತೆ ಆಗಬಾರದು. ರಕ್ತದಲ್ಲಿ ಸಹಿ ಮಾಡಿ ಸ್ವಾಮೀಜಿಗಳು ಕೊನೆ ಉಸಿರು ಇರುವವರೆಗೂ ಮುಂದುವರಿಯಬೇಕು. ಹೆಮ್ಮಬೇತೂರು ಗ್ರಾಮ ಮಾತ್ರವಲ್ಲ, ಸುತ್ತಮುತ್ತಲಿನ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿದ ಆಧುನಿಕ ಭಗೀರಥರು. ಎಷ್ಟೋ ಹಳ್ಳಿಗಳಲ್ಲಿ ಇಂದಿಗೂ ನೀರಾವರಿ ಸೌಲಭ್ಯ ಕಂಡಿದೆ ಅದು ಸಿರಿಗೆರೆ ಶ್ರೀಗಳಿಂದ ಆಗಿರುವ ಕಾರ್ಯದಿಂದ ಮಾತ್ರ. ಹಾಗಾಗಿ, ಶ್ರೀಗಳ ಬದಲಾವಣೆ ಮಾಡಬಾರದು ಎಂಬ ನಿರ್ಣಯ ತೆಗೆದುಕೊಂಡು ಶ್ರೀಗಳ ವಿರುದ್ಧ ಇರುವವರ ಷಡ್ಯಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದರು.

ಪರಮಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಕರಣಧಾರತ್ವದಲ್ಲಿ ಕಾರ್ಯಗತಗೊಂಡಿರುವ 20 ಕ್ಕೂ ಹೆಚ್ಚು ಏತನೀರಾವರಿ ಯೋಜನೆಗಳ ಅಡಿಯಲ್ಲಿ ಸಾವಿರಾರು ಕೆರೆಗಳಿಗೆ ನೀರು ತುಂಬಿಸುವ ಸುಕಾರ್ಯ ಮಾಡಿದ್ದಾರೆ. ಸಮಾಜಮುಖಿ ನಿಸ್ವಾರ್ಥ ಮುಂದಾಳತ್ವ ಎಷ್ಟು ಅವಶ್ಯಕ, ಅದರಲ್ಲೂ ಸರಕಾರ ಕೈಗೊಳ್ಳುವ ಜನಪರ ಯೋಜನೆಗಳು ಪರಿಣಾಮಕಾರಿ ಅನುಷ್ಠಾನ ವಿಚಾರದಲ್ಲಿ ಪರಮಪೂಜ್ಯರು ಮತ್ತು ಶ್ರೀ ಮಠದ ಕಾರ್ಯವೈಖರಿ ಒಂದು ಜಲ್ವಂತ ಉದಾಹರಣೆ ಎಂದು ಹೇಳಿದರು.

ಸಭೆಯಲ್ಲಿ ಎಸ್. ಆರ್. ಪ್ರಕಾಶ್, ನಾಗರಾಜಪ್ಪ, ಎಸ್. ಎನ್. ಕಲ್ಲೇಶಪ್ಪ, ಎನ್. ಎಂ. ಪ್ರಸನ್ನ, ಎಸ್. ಬಸವರಾಜ್, ಬಿ. ಎಸ್. ಸಚಿನ್, ಪಂಪಣ್ಣ, ಸಿ. ಎಸ್. ಪ್ರಕಾಶ, ಹೆಚ್. ಆರ್. ಶಿವಕುಮಾರ, ಇ. ರಮೇಶ, ಕರಿಬಸಣ್ಣ, ಎಸ್. ಎಸ್. ಸೋಮಶೇಖರ್, ಯು. ಆರ್. ಎಸ್. ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

Next Post
ಮಂಗಳೂರಿನ ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ..!

ಮಂಗಳೂರಿನ ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ..!

Leave a Reply Cancel reply

Your email address will not be published. Required fields are marked *

Recent Posts

  • ಮನೆಯ ವಾಸ್ತು ಶಾಸ್ತ್ರದ ನಿರ್ಮಾಣದ ಮಾಹಿತಿ
  • ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು!
  • ಭದ್ರಾ ಜಲಾಶಯ ತುಂಬಲು ಇನ್ನು ಕೇವಲ 39.7 ಅಡಿ ಅಷ್ಟೇ ಬೇಕು!
  • ಏಕದಿನ ನಿವೃತ್ತಿಯ ನಂತರ ಫಾರ್ಮ್ ಗೆ ಮರಳಿದ ಮ್ಯಾಕ್ಸ್‌ವೆಲ್: ವಾಷಿಂಗ್ಟನ್ ಫ್ರೀಡಂಗೆ ಭಾರೀ ಗೆಲುವು
  • ಇಸ್ರೇಲ್ – ಇರಾನ್ ಸಂಘರ್ಷ: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ನಷ್ಟ ಎದುರಿಸುವ ಭಯದಲ್ಲಿ ರಷ್ಯಾ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In