ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಯತ್ನಾಳ್ ರಂತಹ ಮಾದರಿ ರಾಜಕಾರಣಿ ಒಮ್ಮೆ ಸಿಎಂ ಆಗಲಿ : ಬಾಡದ ಆನಂದರಾಜ್

On: February 9, 2025 10:32 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-02-2025

ದಾವಣಗೆರೆ: ಭ್ರಷ್ಟಾಚಾರ ರಹಿತ ಮತ್ತು ಸ್ವಾಭಿಮಾನಿಯುತ ಆಡಳಿತಕ್ಕಾಗಿ ಗಂಧದನಾಡಿನಲ್ಲಿ ಶಾಸಕ ಬಸನಗೌಡ ಪಾಟೇಲ್ ಯಾತ್ನಳ್ ರಂತವರು ಮುಖ್ಯಮಂತ್ರಿಯಾಗಲು ನಾಡಿನ ಜನತೆ ಕಾತುರದಿಂದ ಕಾಯುತ್ತಿದ್ದಾರೆಂದು
ದಾವಣಗೆರೆ ಶೋಷಿತ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಾಡದ ಆನಂದರಾಜ್ ಆಶಯ ವ್ಯಕ್ತಪಡಿಸಿದ್ದಾರೆ.

ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಯತ್ನಾಳ್ ಅವರನ್ನ ಸನ್ಮಾನಿಸಿ ಮಾತನಾಡಿ, ರಾಜ್ಯದಲ್ಲಿ ಮುಲಾಜಿಲ್ಲದೆ ನಿರ್ಧಾರ ತೆಗೆದುಕೊಳ್ಳುವಂತಹ ಪ್ರಧಾನಿ ನರೇಂದ್ರ ಮೋದಿ, ಯುಪಿ ಮುಖ್ಯಮಂತ್ರಿ ಯೋಗಿಯಂತಿರುವ ರಾಜ್ಯದ ಫೈರ್ ಬ್ರಾಂಡ್ ಎಂದೇ ಹೆಸರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಂಥವರು ಒಮ್ಮೆ ರಾಜ್ಯದ ಮುಖ್ಯಮಂತ್ರಿಯಾದರೆ ಭ್ರಷ್ಟಾಚಾರ, ವಂಶಾಡಳಿತ ರಾಜಕಾರಣ ಮತ್ತು ಹೊಂದಾಣಿಕೆ ರಾಜಕಾರಣಕ್ಕೆ ತಿಲಾಂಜಲಿಯಿಟ್ಟು ಸಮೃದ್ದ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಹೇಳಿದರು.

ಯತ್ನಾಳ್ ಅವರಂಥವರನ್ನು ಸಿಎಂ.ಮಾಡಲು ಮಧ್ಯ ಕರ್ನಾಟಕದ ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಡಾ. ಜಿ. ಎಂ. ಸಿದ್ದೇಶ್ವರರವರ ಬೆಂಬಲ ಆನೆ ಬಲ ಸಿಕ್ಕಂತಾಗಿದೆ ಎಂದರು.

ಯತ್ನಾಳ್ ಗೆ ಆನೆ ಬಲ ನೀಡಿದ ಸಿದ್ದೇಶ್ವರ:

ರಾಜ್ಯದಲ್ಲಿ ಬಿಜೆಪಿಯಲ್ಲಿನ ಹೊಂದಾಣಿಕೆ ರಾಜಕೀಯ ಮತ್ತು ವಕ್ಪ್ ವಿರುದ್ಧದ ಹೋರಾಟದ ನೇತೃತ್ವ ವಹಿಸಿರುವ ಶಾಸಕ ಯತ್ನಾಳ್ ರವರ ಹೋರಾಟಕ್ಕೆ ಮಧ್ಯ ಕರ್ನಾಟಕದ ಪ್ರಭಾವಿ ಲಿಂಗಾಯತ ಸಮಾಜದ ಬಿಜೆಪಿ ಹಿರಿಯ ಮುಖಂಡ ಡಾ. ಜಿ. ಎಂ. ಸಿದ್ದೇಶ್ವರ ಅವರು ಬೆಂಬಲ ಕೊಟ್ಟಿರುವುದು ಯತ್ನಾಳ್ ರವರಿಗೆ ಆನೆ ಬಲ ಸಿಕ್ಕಂತಾಗಿದೆ ಬಾಡದ ಆನಂದರಾಜ್ ಹೇಳಿದರು.

ಈ ವೇಳೆ ಜಿ. ಎಂ. ಸಿದ್ದೇಶ್ವರ, ರಾಯಚೂರು ಮಾಜಿ ಸಂಸದ ಭೀಮಾ ನಾಯ್ಕ್. ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಮಾಜಿ ಪ್ರಧಾನ ಕಾರ್ಯದರ್ಶಿ ಬಿ. ಎಸ್. ಜಗದೀಶ್, ಬಿಜೆಪಿ ಯುವ ನಾಯಕ ಎಲ್. ಡಿ. ರವಿ ದಾಗಿಕಟ್ಟೆ,
ನಾಗರಾಜ್ ನಿಲೋಗಲ್ಲ ಪ್ರಸನ್ನಕುಮಾರ್ ಮತ್ತಿತರರು ಹಾಜರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment