ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ನಿಮ್ಮ ಬದುಕು, ಬೆಳವಣಿಗೆ ನಿಮ್ಮ ಹೊಣೆ”: ಟಿ. ಆರ್. ತೇಜಸ್ವಿ ಕಟ್ಟಿಮನಿ ವಿದ್ಯಾರ್ಥಿಗಳಿಗೆ ಟಿಪ್ಸ್

On: February 15, 2025 3:26 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:15-02-2025

ದಾವಣಗೆರೆ: ನಿಮ್ಮ ಬದುಕನ್ನು ನೀವೇ ಕಟ್ಟಿಕೊಳ್ಳಬೇಕು. ನಿಮ್ಮ ಬೆಳವಣಿಗೆ ನಿಮ್ಮ ಹೊಣೆ ಎಂದು ಜಿಎಂಯು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ಟಿ.ಆರ್. ತೇಜಸ್ವಿ ಕಟ್ಟಿಮನಿ ಹೇಳಿದರು.

ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿನ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಜಿಎಂ ವಿಶ್ವವಿದ್ಯಾಲಯದ ಪ್ಯಾಕಲ್ಟಿ ಆಫ್ ಕಂಪ್ಯೂಟಿಂಗ್ ಅಂಡ್ ಐಟಿ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿಗಳ ಫ್ರೆಷರ್ಸ್ ಪಾರ್ಟಿ ಸಮಾರಂಭವನ್ನು ಉದ್ಘಾಟಿಸಿ ಎಂಸಿಎ ವಿದ್ಯಾರ್ಥಿಗಳ ಉದ್ದೇಶಿಸಿ ಮಾತನಾಡಿದರು.

ಯಶಸ್ಸು ಆಕಸ್ಮಿಕವಲ್ಲ. ಸುಲಭವಾಗಿ ಬರುವುದಿಲ್ಲ. ಅದು ಉದ್ದೇಶ, ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮ ಮತ್ತು ಕೌಶಲ್ಯ ಬೇಕು. ನೀವು ನಿಮ್ಮ ಬದುಕು, ವೃತ್ತಿ ಬಗ್ಗೆ ಗಂಭೀರವಾಗಿರಬೇಕು. ಇಲ್ಲವಾದರೆ ಅವಕಾಶಗಳು ಕೈ ತಪ್ಪಿ ಹೋಗುತ್ತವೆ ಎಂದು ಹೇಳಿದರು.

ಕೆಲವೊಂದು ನೋವಿನ ಪ್ರಕ್ರಿಯೆಗಳು ಜೀವನದಲ್ಲಿ ಬರುವುದು ಸಹಜ. ಅವುಗಳ ಮೀರಿ ಮುನ್ನಡೆಯ ಬೇಕು. ಆಗ ಮಾತ್ರ ಬದುಕಲು ಸಾಧ್ಯ. ನಿಮ್ಮಲ್ಲಿರುವ ನಕಾರಾತ್ಮಕತೆಯನ್ನು ದೂರ ಮಾಡಬೇಕು. ಉದ್ಯೋಗ ಕ್ಷೇತ್ರ, ಜೀವನದಲ್ಲಿ ಬದುಕಲು ನಕಾರಾತ್ಮಕತೆ ತೆಗೆದುಹಾಕಬೇಕು. ಆಗ ಮಾತ್ರ ಬದುಕಬಹುದು, ಒಳ್ಳೆಯ ಜೀವನ ನಡೆಸಬಹುದು ಎಂದು ಕಿವಿಮಾತು ಹೇಳಿದರು.

ಶಿಕ್ಷಣವೆಂದರೆ ಕೇವಲ ಸಮಾಜಕ್ಕೆ ಪುರುಷರು ಮತ್ತು ಮಹಿಳೆಯರನ್ನು ಸೃಷ್ಟಿಸುವುದಲ್ಲ. ಸಮಾಜಕ್ಕಾಗಿ ಜ್ಞಾನವಂತ ಪುರುಷರು ಮತ್ತು ಮಹಿಳೆಯರನ್ನು ಸೃಷ್ಟಿಸುವುದೇ ಶಿಕ್ಷಣ. ಕೇವಲ ಇತರರು ಮಾಡಿದ್ದನ್ನು ಮಾಡುವುದಲ್ಲ. ನೀವು ಹೊಸದನ್ನು ಸೃಷ್ಟಿಸಬೇಕು. ಆಗ ತಂತ್ರಜ್ಞಾನ ಕೈಗಾರಿಕೆಯಲ್ಲಿ ಗುರುತಿಸಲಾಗುತ್ತದೆ. ನೀವು ಯಾವಾಗಲೂ ಹೊಸದನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಶೈಕ್ಷಣಿಕ ಸಾಧನೆ ಆಗಿರಬಹುದು, ಪಠ್ಯೇತರ ಚಟುವಟಿಕೆ ಸಾಧನೆ ಆಗಿರಬಹುದು, ಅಥವಾ ಸಹಪಠ್ಯ ಚಟುವಟಿಕೆ ಸಾಧನೆ ಆಗಿರಬಹುದು. ಸಾಧನೆಗಳು ಬೇಕು. ಆತ್ಮವಿಶ್ವಾಸವನ್ನು ಪಡೆದರೆ ನೀವು ವಿಜೇತರಾಗುತ್ತೀರಿ. ನಿಮ್ಮಲ್ಲಿ ಜ್ಞಾನದ ಜೊತೆಗೆ ಕೌಶಲ್ಯಗಳು ಇದ್ದಾಗ ಮಾತ್ರ ಕಂಪನಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದು. ಕಂಪನಿಯವರು ಸಹ ಕೇವಲ ಜ್ಞಾನವನ್ನು ಅಷ್ಟೇ ಅಲ್ಲದೆ ಕೌಶಲ್ಯಗಳನ್ನು ಬಯಸುತ್ತಾರೆ ಎಂದು ತಿಳಿಸಿದರು.

ಜಿಎಂ ವಿಶ್ವವಿದ್ಯಾಲಯದ ಎಂಸಿಎ ವಿಭಾಗದ ಮುಖ್ಯಸ್ಥೆ ಪ್ರೊ. ಎನ್. ಉಷಾ, ಪ್ಯಾಕಲ್ಟಿ ಆಫ್ ಕಂಪ್ಯೂಟಿಂಗ್ ಅಂಡ್ ಐಟಿ ವಿಭಾಗದ ಡೀನ್ ಡಾ. ಶ್ವೇತಾ ಮರೀಗೌಡರ್ ಸೇರಿದಂತೆ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment